No menu items!
12.4 C
Munich
Saturday, May 30, 2026

ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ !

Must read

ಬೆಂಗಳೂರು: ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ ಎಂದು
ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ವಿರೋಧ ಪಕ್ಷದವರ ಹೇಳುವ ಕಾರಣಕ್ಕೆ ಯಾರನ್ನೂ ಬಂಧಿಸಲಾಗಲ್ಲ, ಘಟನೆ ಜರುಗಿದಾಗಿನಿಂದ ಸರ್ಕಾರವು ಎಫ್ ಎಸ್ ಎಲ್ ವರದಿ ಬಂದ ಬಳಿಕ ಕ್ರಮ ಜರುಗಿಸುವುದಾಗಿ ಹೇಳಿತ್ತು ಮತ್ತು ಮಾಧ್ಯಮದವರೂ ಪದೇಪದೆ ವರದಿ ಬಗ್ಗೆ ವಿಚಾರಿಸುತ್ತಿದ್ದರು ಎಂದ ಅವರು ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ದೃಢಪಟ್ಟ ಕೂಡಲೇ ಪೊಲೀಸರು ಮೂವರನ್ನು ಬಂಧಿಸಿ ಮ್ಯಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ .

ಮತ್ತು ನ್ಯಾಯಾಲಯದ ಅನುಮತಿ ಮೇರೆಗೆ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು. ಮುಂದುವರಿದು ಮಾತಾಡಿದ ಪರಮೇಶ್ವರ್, ಯಾವುದೋ ಒಂದು ಖಾಸಗಿ ಎಫ್ ಎಸ್ ಎಲ್ ವಿಡಿಯೋ ಪರೀಕ್ಷಣೆ ನಡೆಸಿ ಪಾಕ್ ಪರ ಘೋಷಣೆ ಕೂಗಿದ್ದನ್ನು ದೃಢಪಡಿಸಿತ್ತು. ಆದರೆ ಸರ್ಕಾರ ಅದನ್ನು ಅಧಿಕೃತ ಎಂದು ಪರಿಗಣಿಸುವುದಿಲ್ಲ, ಆ ಸಂಸ್ಥೆಯು ಸರ್ಕಾರದಿಂದ ಸರ್ಟಿಫೈಡ್ ಆಗಿರುವುದಿಲ್ಲ. ಸರ್ಕಾರದಿಂದ ಸರ್ಟಿಫೈ ಆಗಿರುವ ಸಂಸ್ಥೆಯ ವರದಿಯನ್ನು ಮಾತ್ರ ಅಧಿಕೃತವೆಂದು ಪರಿಗಣಿಸಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.

- Advertisement -spot_img

More articles

- Advertisement -spot_img

Latest article