ವಿರೋಧ ಪಕ್ಷದ ನಾಯಕರಾಗುತ್ತಿದ್ದಂತೆ ಸಿಹಿಸುದ್ದಿ ನೀಡಿದ್ದಾರೆ !?

0
182

ವಿಪಕ್ಷ ನಾಯಕನ ಅಧಿಕೃತ ಸ್ಥಾನಮಾನದೊಂದಿಗೆ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಲು ಮುಂದಾಗಿರುವ ಸಿದ್ದರಾಮಯ್ಯ, ನೆರೆಪೀಡಿತ ಪ್ರದೇಶಗಳಿಗೆ ಪ್ರವಾಸ ತೆರಳಲು ತೀರ್ಮಾನಿಸಿದ್ದು, ಅಧಿಕಾರಿಗಳ ಸಭೆ ನಡೆಸಿ ಈವರೆಗೆ ನೀಡಲಾಗಿರುವ ನೆರವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ.

ಈ ಮೊದಲು ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಪ್ರವಾಸ ತೆರಳಿದ್ದರಾದರೂ ವಿಪಕ್ಷ ನಾಯಕನ ಸ್ಥಾನ ಇರದಿದ್ದ ಕಾರಣ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಲು ಅವಕಾಶವಿರಲಿಲ್ಲ. ಆದರೀಗ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದು, ಹೀಗಾಗಿ ನೆರೆಪೀಡಿತ ಪ್ರದೇಶಗಳಿಗೆ ಪ್ರವಾಸ ತೆರಳಿ ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಿರ್ಧರಿಸಿದ್ದಾರೆ.

LEAVE A REPLY

Please enter your comment!
Please enter your name here