ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ: ವೀರಪ್ಪ ಮೊಯ್ಲಿ

0
75

ಬೆಳಗಾವಿ: ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ ಅನುಷ್ಠಾನ ಮಾಡಿದ್ದೇವೆ. ಯುವನಿಧಿಯನ್ನ ಜನವರಿಯಿಂದ ಜಾರಿ ಮಾಡುತ್ತೇವೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸುಭದ್ರವಾಗಿದೆ, ಚಟುವಟಿಕೆ ಇದ್ದ ಪಕ್ಷ ನಮ್ಮದು, ವಿರೋಧ ಪಕ್ಷದ ನಾಯಕರಿಲ್ಲದೇ ಬಿಜೆಪಿ ಡೆಡ್ ಆಗಿದೆ ಎಂದರು. ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮೊಯ್ಲಿ, ನಾನು ಹೈಕಮಾಂಡ್ ಅಲ್ಲ. ಆದರೆ, ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.
ಸಚಿವ ಸತೀಶ ಜಾರಕಿಹೊಳಿ ದುಬೈ ಪ್ರವಾಸಕ್ಕೆ ಹೋಗುವ ವಿಚಾರದ ಬಗ್ಗೆ ಮಾತನಾಡಿ, ಸತೀಶ ಜಾರಕಿಹೊಳಿ ಜೊತೆ ನಾನು ಯಾವುದೇ ಚರ್ಚೆ ನಡೆಸಿಲ್ಲ. ಅವರ ವೈಯಕ್ತಿಕ ವಿಚಾರಗಳಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ. ನಾನು ಅಧಿಕ ಪ್ರಸಂಗದ ರಾಜಕಾರಣಿ ಅಲ್ಲ ಎಂದು ಹೇಳಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಮನೆಯಲ್ಲಿ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ಹೇಳಿಕೆ ನೀಡಿ, ಡಿನ್ನರ್ ಗೆ ಎಲ್ಲರನ್ನೂ ಕರೆಯಬೇಕು ಅಂತೇನಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ ಬಗ್ಗೆ ಪರಮೇಶ್ವರ್ ಅವರನ್ನೇ ಕೇಳಿ ಎಂದು ಹೇಳಿದ್ದಾರೆ.