No menu items!
24.7 C
Munich
Saturday, May 2, 2026

ವಿವಾದದ ಬೆಂಕಿ ಹಚ್ಚಿದ ಕಾಂಗ್ರೆಸ್..! ಮೋದಿಯನ್ನ ಮದುವೆಯಾದ್ರೆ ಮಕ್ಕಳಾಗಲ್ವಂತೆ..!?

Must read

ಪ್ರಧಾನಿ ನರೇಂದ್ರ ಮೋದಿ ಜೊತೆ ಮದ್ವೆಯಾಗಬಹುದು, ಆದರೆ ಅವರಿಗೆ ಮಕ್ಕಳಾಗಲ್ಲ ಎಂದು ಬಸವಕಲ್ಯಾಣ ಕೈ ಶಾಸಕ ಬಿ ನಾರಾಯಣ್‍ರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ನಡೆದ ಕೈ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಹಿಂದೆ ಇಡೀ ದೇಶವಿದೆ. ಆದರೆ ಅದು ಮೋದಿಗೆ ಅರ್ಥವಾಗುತ್ತಿಲ್ಲ. ನಾಮರ್ಧ್ ಕೇ ಸಾಥ್ ಶಾದಿ ಹೋ ಸಕ್ತಿ ಹೈ, ಮಗರ್ ಔಲಾದ್ ನಹೀ ಹೋತಿ ಹೈ ಎಂದು  ಹೇಳಿ ಪ್ರಧಾನಿ ಅವರನ್ನು ಷಂಡರಿಗೆ ಹೋಲಿಸಿ ವ್ಯಂಗ್ಯವಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯನ್ನು ಎದುರಿಸೋ ಶಕ್ತಿ ಮೋದಿಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದೊಂದು ದಿನ ದೇಶದ ಪ್ರಧಾನಿಯಾಗಲಿದ್ದಾರೆ ಎನ್ನುತ್ತ ಹಿಂದಿಯ ಶಾಯರಿಯೊಂದನ್ನು ಬಳಸಿ ಮೋದಿ ಅವರಿಗೆ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನಾರಾಯಣ್‍ರಾವ್ ನೀಡಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article