ವಿಶ್ವ ಚಾಂಪಿಯನ್ಶಿಪ್ ನೋಡಲು ಗಂಗೂಲಿಗಿಲ್ಲ ಚಾನ್ಸ್!

Date:

ಟೀಮ್ ಇಂಡಿಯಾ ಜೂನ್ 3ರಂದು ಇಂಗ್ಲೆಂಡ್‌ನ ಸೌತಾಂಪ್ಟನ್ ತಲುಪಲಿದ್ದು ಜೂನ್ 18ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಮುಗಿದ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಳ್ಳಲಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಇನ್ನು ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.

ಹೌದು ಇಂಗ್ಲೆಂಡ್ ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದ ಪ್ರಕಾರ ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಇಂಗ್ಲೆಂಡ್‌ಗೆ ತೆರಳಿ ಪಂದ್ಯ ವೀಕ್ಷಿಸಬೇಕೆಂದರೆ ಹತ್ತು ದಿನಗಳ ಕಾಲ ಕಠಿಣ ಕ್ವಾರಂಟೈನ್ ನಿಯಮವನ್ನು ಅನುಸರಿಸಬೇಕಾಗಬಹುದು, ಅಷ್ಟೇ ಅಲ್ಲದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಗಂಗೂಲಿ ಮತ್ತು ಜಯ್ ಶಾಗೆ ಇನ್ನೂ ಅನುಮತಿಯನ್ನು ನೀಡಿಲ್ಲ. ದೇಶದಲ್ಲಿನ ಕಠಿಣ ಕ್ವಾರಂಟೈನ್ ನಿಯಮದಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...