ವಿಷ್ಣುವರ್ಧನ್, ಶಂಕರ್ ನಾಗ್ ಅವರನ್ನು ಕನ್ನಡಕ್ಕೆ ಪರಿಚಯಿಸಿದ್ದು ಕಾರ್ನಾಡ್..!

Date:

ಗಿರೀಶ್ ಕಾರ್ನಾಡ್ ಕನ್ನಡದ ಹಿರಿಯ ಸಾಹಿತಿ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲಾಗದು.
ನಾಟಕಕಾರರಾಗಿ, ಸಾಹಿತಿಯಾಗಿ, ಸಿನಿಮಾ ನಿರ್ದೇಶಕರಾಗಿಯೂ, ಸಿನಿಮಾ ನಟರಾಗಿಯೂ ಗಿರೀಶ್ ಕಾರ್ನಾಡರು ಅನನ್ಯ ಸೇವೆ ಸಲ್ಲಿಸಿದ್ದಾರೆ.
1970 ರಲ್ಲಿ ರಿಲೀಸ್ ಆದ ಸಂಸ್ಕಾರ ಸಿನಿಮಾದ ಮೂಲಕ ಅವರು ಸಿನಿಮಾ ಪಯಣ ಆರಂಭಿಸಿದರು. ಸಂಸ್ಕಾರ ಯು.ಆರ್.ಅನಂತಮೂರ್ತಿ ಅವರ ಕಾದಂಬರಿ ಆಧಾರಿತ ಸಿನಿಮಾ. `ಸಂಸ್ಕಾರ’ ಚಿತ್ರದಲ್ಲಿ ಪ್ರಾಣೇಶಾಚಾರ್ಯ ಪಾತ್ರವನ್ನು ನಿಭಾಯಿಸಿದರು. ಆ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಕೂಡ ಇವರೇ ಬರೆದಿದ್ದರು. ಅದಾದ ಮೇಲೆ ಶಂಕರ ನಾಗ್ ನಿರ್ದೇಶನದ `ಮಾಲ್ಗುಡಿ ಡೇಸ್‌’ ಕಿರುತೆರೆ ಧಾರಾವಾಹಿಯಲ್ಲಿ ಅಭಿನಯಿಸಿದ್ದರು. ಎಸ್.ಎಲ್.ಭೈರಪ್ಪನವರ ಕಾದಂಬರಿ ಆಧಾರಿತ `ವಂಶವೃಕ್ಷ’ ತೆರೆಗೆ ತರುವ ಮೂಲಕ ಡೈರೆಕ್ಟರ್ ಕೂಡ ಆದರು.
ನಂತರದ ದಿನಗಳಲ್ಲಿ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲೆಯಾಳಂ‌ ಮರಾಠಿ ಸಿನಿಮಾರಂಗದಲ್ಲೂ ಛಾಪು ಮೂಡಿಸಿದರು.
ಇನ್ನು ಪ್ರಮುಖ ವಿಷಯ ಎಂದರೆ ಕನ್ನಡದ ಪ್ರಮುಖ ನಟರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ಹಿರಿಮೆ ಗಿರೀಶ್ ಕಾರ್ನಾಡ ಅವರದ್ದು.


ಸಾಹಸಸಿಂಹ ವಿಷ್ಣುವರ್ಧನ್ ಅವರನ್ನು ಕನ್ನಡಕ್ಕೆ ಪರಿಚಯಿಸಿದ ಕೀರ್ತಿ ಇದೇ ಗಿರೀಶ್ ಕಾರ್ನಾಡವರದ್ದು. ಗಿರೀಶ್ ಕಾರ್ನಾಡವರು ನಿರ್ದೇಶನದ ಮೊದಲ ಸಿನಿಮಾ ‘ವಂಶವೃಕ್ಷ’ ಮೂಲಕ ಸಾಹಸಸಿಂಹ ವಿಷ್ಣುವರ್ಧನ್ ಅವರು ಸಿನಿಮಾ ರಂಗ ಪ್ರವೇಶಿಸಿದರು.
ಅದೇರೀತಿ ಕರಾಟೆ ಕಿಂಗ್ ಶಂಕರ್ ನಾಗ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದೇ ಗಿರೀಶ್ ಕಾರ್ನಾಡ್. ಗಿರೀಶ್ ಕಾರ್ನಾಡರ ಒಂದಾನೊಂದು ಕಾಲದಲ್ಲಿ ಸಿನಿಮಾ ಮೂಲಕ ಶಂಕರಣ್ಣ ಸ್ಯಾಂಡಲ್ ವುಡ್ ಪ್ರವೇಶಿಸಿದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...