ವಿಷ್ಣು ಪ್ರತಿಮೆ ಧ್ವಂಸ, ಶಿವಣ್ಣನ ಹೆಸರು ; ಪ್ರತಿಭಟನೆ!

Date:

ಮಾಗಡಿ ರಸ್ತೆಯಲ್ಲಿನ ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ ದಿನದಿಂದ ದಿನಕ್ಕೆ ತೀವ್ರವಾದ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ರಾತ್ರೋರಾತ್ರಿ ವಿಷ್ಣು ಪ್ರತಿಮೆ ಹಾಳಾಗಿದ್ದನ್ನು ಕಂಡ ವಿಷ್ಣು ಅಭಿಮಾನಿಗಳು ಪ್ರತಿಭಟನೆಯನ್ನು ನಡೆಸಿದ್ದರು. ಇದಾಗಿ ಒಂದಷ್ಟು ದಿನ ಕಳೆದ ನಂತರ ಇದೀಗ ಮತ್ತೆ ಕಿಡಿಗೇಡಿಗಳಿಂದ ವಿಷ್ಣು ಪ್ರತಿಮೆ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ.

 

ಹೌದು ಸಾಮಾಜಿಕ ಜಾಲತಾಣದಲ್ಲಿ ವಿಷ್ಣು ಪ್ರತಿಮೆ ಕುರಿತಂತೆ ರಾಜಣ್ಣ ಅಭಿಮಾನಿಗಳು ಮತ್ತು ಶಿವರಾಜಕುಮಾರ್ ಅವರ ಅಭಿಮಾನಿಗಳನ್ನು ಕೆಲ ಕಿಡಿಗೇಡಿಗಳು ನಿಂದಿಸಿದ್ದಾರೆ. ವಿಷ್ಣು ಪ್ರತಿಮೆ ವಿಚಾರಕ್ಕೆ ರಾಜಣ್ಣ ಮತ್ತು ಶಿವಣ್ಣ ಹೆಸರನ್ನು ಸೇರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕುವ ಮುಖಾಂತರ ರಾಜವಂಶದ ಹೆಸರನ್ನು ಹಾಳು ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ರಾಜಣ್ಣ ಮತ್ತು ಶಿವಣ್ಣ ಅವರ ಅಭಿಮಾನಿಗಳು ನಿನ್ನೆ ಪ್ರಸನ್ನ ಚಿತ್ರಮಂದಿರದ ಎದುರು ಕಿಡಿಗೇಡಿಗಳ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.

ಅಷ್ಟೇ ಅಲ್ಲದೆ ಮಾಗಡಿ ರಸ್ತೆಯ ಪೊಲೀಸ್ ಠಾಣೆಗೆ ಹೋಗಿ ಕಿಡಿಗೇಡಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಯಾರೋ ಮಾಡಿದ ನೀಚ ಕೃತ್ಯದಿಂದ ಇದೀಗ ಸ್ಟಾರ ನಟರುಗಳ ಅಭಿಮಾನಿಗಳು ಕಿತ್ತಾಡುವಂತಾಗಿದೆ.

Share post:

Subscribe

spot_imgspot_img

Popular

More like this
Related

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...