ವೀಕೆಂಡ್ ಕರ್ಫ್ಯೂ ಅಂತ್ಯ: ಆದರೆ ಮತ್ತಷ್ಟು ಕಠಿಣ ನಿಯಮಕ್ಕೆ ತಯಾರಾಗಿ!

1
88

ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.

ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಲಿದ್ದು, ಸಚಿವರಾದ ಆರ್.ಅಶೋಕ್, ಡಾ.ಕೆ. ಸುಧಾಕರ್, ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರಿ 31 ರ ವರೆಗೆ ಅನೇಕ ನಿಯಮಗಳು ಮುಂದುವರೆಯಲಿವೆ. ಜ. 17 ರ ಇಂದು ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಿದೆ.

ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

1 COMMENT

LEAVE A REPLY

Please enter your comment!
Please enter your name here