ವೃದ್ದೆ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಅರ್ಪಿಸಿದ ಯಕೃತ್ ದಾನಿ ಮಹಿಳೆ!

Date:

ವೃದ್ದೆ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಅರ್ಪಿಸಿದ ಯಕೃತ್ ದಾನಿ ಮಹಿಳೆ!

ಉಡುಪಿ:- ವೃದ್ದೆ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣ ಅರ್ಪಿಸಿದ ಘಟನೆ ಜರುಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಘಟನೆ ಜರುಗಿದೆ.

ಅರ್ಚನಾ ಕಾಮತ್ ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದ 34 ವರ್ಷದ ಅರ್ಚನಾ ಕಾಮತ್ ಅವರು ಯಕೃತ್ ದಾನ ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ.

ಸದಾ ಸಮಾಜಮುಖಿ ಚಿಂತನೆಯೊಂದಿಗೆ ಸಕ್ರಿಯವಾಗಿದ್ದ ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ತಮ್ಮ ಯಕೃತ್‌ನ ಒಂದು ಭಾಗವನ್ನು ಪತಿಯ ಸಂಬಂಧಿಗೆ ದಾನ ಮಾಡಿ ಇಹಲೋಕ ತ್ಯಜಿಸಿದ್ದಾರೆ. ಅಕಾಲಿಕ ನಿಧನದಿಂದ ಅರ್ಚನಾ ಅವರ ಸಂಬಂಧಿಕರು, ಆತ್ಮೀಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...