ವ್ಯಸನಿ ಪೋಷಕರದೆಸೆಯಿಂದ ಆಂಧ್ರದಲ್ಲಿ ಮಣ್ಣು ತಿಂದು ಸಾವನ್ನಪ್ಪಿದ ಕರ್ನಾಟಕದ ಮಕ್ಕಳು..!

Date:

ದುಷ್ಚಟಗಳು ಜೀವ ಹಾಗೂ ಜೀವನ ಎರಡನ್ನೂ ಹಾಳು ಮಾಡುತ್ತವೆ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವಲ್ಲಿ ಜಾಗೃತಿ ಮೂಡವುದೇ ಇಲ್ಲ. ಕುಡುಕ ಪೋಷಕರ ಬೇಜಬ್ದಾರಿಯಿಂದ ಮಕ್ಕಳು ಮಣ್ಣು ತಿಂದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಹೇಶ್ ಮತ್ತು ನಾಗಮಣಿ ದಂಪತಿಯ 3 ವರ್ಷದ ಮಗು ಸಂತೋಷ್ ಹಾಗೂ ಆ ನಾಗಮಣಿಯ ಸೋದರಿಯ 2 ವ4ರ್ಷದ ಮಗು ವೆನ್ನೆಲಾ ಮಣ್ಣು ತಿಂದು ಅಸುನೀಗಿದ ಪುಟಾಣಿ ಕಂದಮ್ಮಗಳು.
ಮಹೇಶ್ ಹಾಗೂ ನಾಗಮಣಿ ದಂಪತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಕದ್ರಿ ಮಂಡಲದ ಕುಮ್ಮಾರವಂಡಲಪಲ್ಲೆ ಗ್ರಾಮಕ್ಕೆ ವಲಸೆ ಹೋಗಿ ಅಲ್ಲಿಯೇ ಕೂಲಿ-ಗೀಲಿ ಮಾಡುತ್ತಾ ಬದುಕು ನಡೆಸುತ್ತಿದ್ದಾರೆ. ಇವರೊಡನೆ ಇವರ 5 ಮಕ್ಕಳು, ನಾಗಮಣಿ ತಾಯಿ ಹಾಗೂ ಸೋದರಿಯ ಮಗು ವಾಸವಿತ್ತು. ನಾಗಮಣಿ ಮತ್ತಾಕೆಯ ಗಂಡ ಕೆಲಸಕ್ಕೆ ಹೋಗುತ್ತಿದ್ದರೆ. ನಾಗಮಣಿಯ ತಾಯಿ ಮಕ್ಕಳನ್ನು ನೋಡಿಕೊಂಡು ಮನೆಯಲ್ಲಿದ್ದರು. ಮಹೇಶ್ ಮತ್ತು ನಾಗಮಣಿ ಮತ್ತವಳ ತಾಯಿ ಮದ್ಯ ವ್ಯಸನಿಗಳು. ಮಕ್ಕಳಿಗೆ ಸರಿಯಾಗಿ ಊಟ ಹಾಕುತ್ತಿರಲಿಲ್ಲ. ಹಸಿವಿನಿಂದ ಮಕ್ಕಳು ಮಣ್ಣು ತಿನ್ನುತ್ತಿದ್ದವು. 6 ತಿಂಗಳ ಹಿಂದೆ ಸಂತೋಷ್ ಮೃತಪಟ್ಟಿದ್ದ.ಆಗ ಯಾರಿಗೂ ಗೊತ್ತಾಗದಂತೆ ಹೂತು ಹಾಕಿದ್ದರು. ಈಗ ವೆನ್ನೆಲಾ ಎನ್ನುವ ಮಗು ಅಂದರೆ ನಾಗಮಣಿಯ ಸೋದರಿ ಮಗು ಮೃತಪಟ್ಟಿದೆ.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...