ಶಕ್ತಿ ಯೋಜನೆಯಲ್ಲೂ ಯಾವುದೇ ಪರಿಷ್ಕರಣೆ ಇಲ್ಲ. ನನ್ನ ಹೇಳಿಕೆ ತಿರುಚಲಾಗಿದೆ: ಡಿ.ಕೆ ಶಿವಕುಮಾರ್
ಬೆಂಗಳೂರು: ಶಕ್ತಿ ಯೋಜನೆಯಲ್ಲೂ ಯಾವುದೇ ಪರಿಷ್ಕರಣೆ ಇಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ. ಶಕ್ತಿ ಯೋಜನೆಯಲ್ಲೂ ಯಾವುದೇ ಪರಿಷ್ಕರಣೆ ಇಲ್ಲ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ತಿಳಿಸಿದ್ದಾರೆ.
ಮುಂದುವರಿದು, ನಮ್ಮ ಸರ್ಕಾರವನ್ನ ಷಡ್ಯಂತ್ರದಿಂದ ಕೆಡವಲು ಯಾರ ಹಣೆಯಲ್ಲೂ ಬರೆದಿಲ್ಲ. ಇನ್ನೂ ಎಂಟೂವರೆ ವರ್ಷ ನಮ್ಮದೇ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.