ಶಬರಿಮಲೆ ಸನ್ನಿಧಾನಂನಲ್ಲಿ ಸೇತುವೆ ಮೇಲಿಂದ ಮಾಲಿಕಪ್ಪುರಂಗೆ ಜಿಗಿದು ಭಕ್ತ ಆತ್ಮಹತ್ಯೆ!
ಶಬರಿಮಲೆ : ಕನಕಪುರ ಮೂಲದ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಮೃತ ಭಕ್ತರನ್ನ ರಾಮನಗರ ಜಿಲ್ಲೆ ಕನಕಪುರದ ನಿವಾಸಿ ಕುಮಾರ್ ಎಂದು ಗುರುತಿಸಲಾಗಿದ್ದು, ಮಾಲೆ ಧರಿಸಿದ್ದ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಶಬರಿಮಲೆಗೆ ದರ್ಶನಕ್ಕೆ ಹೋಗಿದ್ದು. ಈ ವೇಳೆ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರ್ ಅವರ ಮೃತದೇಹವನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜಿಗೆ ರವಾನೆ ಮಾಡಿದ್ದು. ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. 40 ವರ್ಷದ ಕುಮಾರ್ ಅವರು ಈ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಶಬರಿಮಲೆಗೆ ಕುಮಾರ್ ಕುಟುಂಬಸ್ಥರು ತೆರಳಿದ್ದಾರೆ. ದೇವಾಲಯದ ಮೇಲಿಂದ ಜಿಗಿಯುವ ಈ ದೃಶ್ಯ ಭಕ್ತರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ. ಶಬರಿಮಲೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.