ಇದು ಇಡೀ ದೇಶ ಬೆಚ್ಚಿ ಬೀಳುವ ಸುದ್ದಿ. ಯುವ ಸಂಸದ ತೇಜಸ್ವಿ ಸೂರ್ಯ ಮತ್ತು ಜನಪ್ರಿಯ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯನ್ನು ಕೊಲ್ಲಲು ದುಷ್ಕರ್ಮಿಗಳು ಸಂಚು ರೂಪಿಸಿದ್ದರು ಎಂಬ ಶಾಕಿಂಗ್ ನ್ಯೂಸ್ ಬಂದಿದೆ.
ಬೆಂಗಳೂರಿನ ಟೌನ್ ಹಾಲ್ನಲ್ಲಿ ಡಿಸೆಂಬರ್ 22ರಂದು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆದ ಜಾಥಾ ಮುಗಿಸಿಕೊಂಡು ತೆರಳುತ್ತಿದ್ದಾಗ ಆರ್ ಎಸ್ ಎಸ್ ಕಾರ್ಯಕರ್ತ ವರುಣ್ ಎಂಬುವವರ ಮೇಲೆ 2 ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ರಾಡ್, ಲಾಂಗ್ಗಳಿಂದ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಬರ್, ಸಿದ್ದಿಕ್ ಎಂಬ ಆರೋಪಿಗಳು ಸೇರಿದಂತೆ 6 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ವರುಣ್ ತಮ್ಮ ಟಾರ್ಗೆಟ್ ಆಗಿರಲಿಲ್ಲ. ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ನಮ್ಮ ಟಾರ್ಗೆಟ್ ಆಗಿದ್ದರು ಎಂದು ಬಾಯ್ಬಿಟ್ಟಿದ್ದಾರೆ.
ಶಾಕಿಂಗ್ ನ್ಯೂಸ್ : ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸಂಚು!
Date: