ಶಾಕಿಂಗ್ ಸುದ್ದಿ ! ದಾಳಿಗೆ ಉಗ್ರರ ಸಂಚು, ದೇಶಾದ್ಯಂತ ಹೈಅಲರ್ಟ್ ಘೋಷಣೆ..!

Date:

ಬೌದ್ಧರ ಪವಿತ್ರ ದಿನವಾದ ಬುದ್ದ ಪೌರ್ಣಿಮೆ ದಿನದಂದು ಬಾಂಗ್ಲಾದೇಶದ ಜಮಾತ್-ಉಲ್-ಮುಜಾಯಿದ್ದೀನ್ ಅಥವಾ ಇಸ್ಲಾಮಿಕ್ ಸ್ಟೇಟ್ ಉಗ್ರರು ದೇಶದ ನಾನಾ ಕಡೆ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿರುವುದನ್ನು ಕೇಂದ್ರ ಗುಪ್ತಚರ ವಿಭಾಗ ಪತ್ತೆಹಚ್ಚಿದೆ.

ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ, ಈಶಾನ್ಯ ರಾಜ್ಯಗಳು ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಮತ್ತಿತರ ಕಡೆ ಹೆಚ್ಚಿನ ಬಿಗಿಭದ್ರತೆ ಕೈಗೊಳ್ಳಬೇಕೆಂದು ಗೃಹ ಇಲಾಖೆಗೆ ಗುಪ್ತಚರ ವಿಭಾಗ ಸೂಚನೆ ಕೊಟ್ಟಿದೆ.

ಗರ್ಭಿಣಿ ವೇಷದಲ್ಲಿರುವ ಜಮಾತ್-ಉಲ್-ಮುಜಾಯಿದ್ದೀನ್ ಸಂಘಟನೆಯ ಆತ್ಮಾಹುತಿ ದಳದ ಮಹಿಳಾ ಉಗ್ರರು ಭಾರತದ ಬುದ್ದ ದೇವಾಲಯಗಳು ಇಲ್ಲವೇ ಹಿಂದೂಗಳ ಮಂದಿರಗಳನ್ನು ಗುರಿಯಾಗಿಟ್ಟುಕೊಂಡು ಭಾರೀ ಪ್ರಮಾಣದ ದಾಳಿ ನಡೆಸಲು ಕಳೆದ ಹಲವು ದಿನಗಳಿಂದ ಸಂಚು ರೂಪಿಸಿರುವುದನ್ನು ಪತ್ತೆ ಮಾಡಿದೆ.

ಶ್ರೀಲಂಕಾದಲ್ಲಿ ಪವಿತ್ರ ಈಸ್ಟರ್ ದಿನದಂದು ರಾಜಧಾನಿ ಕೊಲಂಬೊದಲ್ಲಿ ನಡೆದ ದಾಳಿಗೂ ಈಗ ಭಾರತದಲ್ಲಿ ನಡೆಸಲು ಸಂಚು ರೂಪಿಸಿರುವ ಉಗ್ರರೇ ಈ ಕೃತ್ಯ ನಡೆಸಿರುವ ಸಾಧ್ಯತೆ ಇರುವುದರಿಂದ ಕೂಡಲೇ ಪ್ರಮುಖ ಧಾರ್ಮಿಕ ಕೇಂದ್ರಗಳು, ಸರ್ಕಾರಿ ಕಟ್ಟಡಗಳು, ಸಾರ್ವಜನಿಕ ಆಸ್ತಿಗಳು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮೆಟ್ರೋ ರೈಲು, ರಾಷ್ಟ್ರಪತಿ ಭವನ, ಪ್ರವಾಸಿ ನಿವಾಸ, ರಾಯಭಾರಿ ಕಚೇರಿಗಳು, ಸಂಸತ್ ಆವರಣ, ಸುಪ್ರೀಂಕೋರ್ಟ್, ಸಮುದ್ರ ತೀರ ಪ್ರದೇಶಗಳು, ಕರಾವಳಿ ತೀರಪ್ರದೇಶ, ಗಣ್ಯರ ನಿವಾಸ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆಯನ್ನು ಕೈಗೊಳ್ಳಬೇಕೆಂದು ಸೂಚನೆ ಕೊಡಲಾಗಿದೆ.

ಗುಪ್ತಚರ ವಿಭಾಗ ಸೂಚನೆ ಕೊಟ್ಟ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಕಳೆದ ರಾತ್ರಿಯೇ ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ದೇಶದ ಇತರೆ ರಾಜ್ಯಗಳ ಕಾರ್ಯದರ್ಶಿಗಳ ಜೊತೆಯೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ತಿರುಗಾಟ ನಡೆಸುತ್ತಿದ್ದರೆ ಕೂಡಲೇ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆಯೂ ಸೂಚನೆ ಕೊಡಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...