ಶಾಲೆಯನ್ನು ಕಲರ್ಫುಲ್ ಆಗಿಸಿದ ‘ಕಿರಿಕ್’ ಡೈರೆಕ್ಟರ್..!

Date:

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಸಿನಿಮಾ ಇತ್ತೀಚಿಗೆ ತೆರೆಕಂಡು ಕನ್ನಡ ಚಿತ್ರರಂಗದಲ್ಲಿ ವಿಭಿನ್ನವಾಗಿ ಸದ್ದು ಮಾಡಿತ್ತು. ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಅನೇಕರನ್ನು ಕನ್ನಡ ಶಾಲೆಯತ್ತ ತಿರುಗಿ ನೋಡುವಂತೆ ಮಾಡಿತ್ತು. ಆದ್ರೆ ರಿಷಬ್ ಶೆಟ್ಟಿ ಶೂಟಿಂಗ್ಗೆ ಮಾತ್ರ ಶಾಲೆಯನ್ನು ಬಳಸಿಕೊಂಡು ಸುಮ್ಮನಾಗಲಿಲ್ಲ ಮುಚ್ಚುವ ಭೀತಿ ಎದುರಿಸುತ್ತಿದ್ದ ಆ ಶಾಲೆಯನ್ನೆ ದತ್ತು ಪಡೆದಿದ್ರು.
ಕೇವಲ ನೆಪ ಮಾತ್ರಕ್ಕೆ ದತ್ತು ಪಡೆದು ಸುಮ್ಮನಾಗಿಲ್ಲ. ಆ ಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಕಲರ್ಫುಲ್ ಆಗಿಸಿದ್ದಾರೆ. ಬೇಸಿಗೆ ರಜೆ ಮುಗಿಸಿ ಬರುವ ಮಕ್ಕಳಿಗೆ ಸರ್ಪ್ರೈಸ್ ನೀಡಿದ್ದಾರೆ. ಶಾಲೆಗೆ ಸುಣ್ಣ ಬಣ್ಣ ಬಳಿದು ಮಾಡ್ರನ್ ಶಾಲೆಯನ್ನಾಗಿ ಮಾಡಿದ್ದಾರೆ. ಶಾಲೆಯ ಗೋಡೆ ಮೇಲೆ ಬಣ್ಣ ಬಣ್ಣದ ಚಿತ್ತಾರ, ಕಲೆ, ಸಾಹಿತ್ಯ, ಸಂಸ್ಕೃತಿಯ ಚಿತ್ರಗಳನ್ನು ಬಿಡಿಸುವ ಮೂಲಕ ರಿಷಭ್ ಶೆಟ್ಟಿ ಶಾಲೆಗೆ ಹೊಸ ರೂಪ ನೀಡಿದ್ದಾರೆ.
ಬೇಸಿಗೆ ರಜೆ ಕಳೆದು ಬರುವ ಮಕ್ಕಳಿಗೆ ಹೊಸ ಶಾಲೆ, ಹೊಸ ಕಲಿಕೆ, ಹೊಸ ಜೀವನದ ಮೂಲಕ ಭವಿಷ್ಯ ನೀಡುವ ಪ್ರಯತ್ನದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದೇವೆ. ಆ ಮಕ್ಕಳ ಭವಿಷ್ಯಕ್ಕೂ ನಮ್ಮ ಪ್ರಯತ್ನಕ್ಕೂ ನಿಮ್ಮ ಸಹಕಾರವಿರಲಿ ಅಂತಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಕ್ಕಳಿಗೆ ಶುಭ ಹಾರೈಸಿದ್ದಾರೆ. ಕನ್ನಡ ಶಾಲೆಯ ಉಳಿವಿಗಾಗಿ ಸಹಕಾರ ನೀಡ್ತೀರೋದು ನಿಜಕ್ಕೂ ಹೆಮ್ಮೆಯ ವಿಷಯ

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...