ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

Date:

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಜ್ಯ ಸರ್ಕಾರದ ಸಂಪುಟ ಸಭೆಯಲ್ಲಿ 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನವಾಗಬಹುದು ಎಂದು ತಿಳಿಸಿದ್ದಾರೆ. ಅಧಿವೇಶನದಲ್ಲಿ ಮನರೇಗಾ ಯೋಜನೆಯ ಮರುಜಾರಿ ಮಹತ್ವ ಮತ್ತು ಕೇಂದ್ರ ಸರ್ಕಾರದ ನೂತನ ಕಾಯ್ದೆಗಳ ಅನಾನುಕೂಲತೆಗಳನ್ನು ಚರ್ಚಿಸಲಾಗುತ್ತದೆ.
ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಪೂರ್ವಸಿದ್ಧತಾ ಸಭೆ ನಲ್ಲಿ ಶಿವಕುಮಾರ್ ಮಾತನಾಡಿದರು. ನಾಳೆ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆ ತೀರ್ಮಾನ ಮಾಡಲಾಗುವುದು.
ಈ ಅಧಿವೇಶನದಲ್ಲಿ ಮನರೇಗಾ ಯೋಜನೆ ಮರುಜಾರಿಯ ಮಹತ್ವ ಹಾಗೂ ಕೇಂದ್ರ ಸರ್ಕಾರದ ನೂತನ ಕಾಯ್ದೆಯ ಅನಾನುಕೂಲಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಲಾಗುವುದು. ನಂತರ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಇನ್ನು ಈ ಎಐಸಿಸಿ ಕಾರ್ಯಕ್ರಮಗಳನ್ನು ನಿಮ್ಮ ಸ್ಥಳೀಯ ಮಟ್ಟದಲ್ಲಿ ನಡೆಸುವಾಗ ಎಲ್ಇಡಿ ಪರದೆ ಹಾಕಿಸಿ ಸೋನಿಯಾ ಗಾಂಧಿ ಅವರ ಸಂದೇಶವನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು.
ಬಳಿಕ ಜ.26ರಿಂದ ಫೆ.7ರವರೆಗೆ ಎಲ್ಲಾ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಬೇಕು. ಇದರಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರು, ನಮ್ಮ ನಾಯಕರು ಶಾಸಕರು ಹಾಗೂ ಸಚಿವರ ನೇತೃತ್ವದಲ್ಲಿ ಪಾದಯಾತ್ರೆ ಮಾಡಬೇಕು. ನಂತರ ಮನರೇಗಾ ಮರುಜಾರಿಗೆ ತಾಲ್ಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಬೇಕು.
ಸುಮಾರು ಐದಾರು ಕಡೆ ಪಾದಯಾತ್ರೆ ಮಾಡಲು ನಾನೇ ಖುದ್ದಾಗಿ ಬರುತ್ತೇನೆ. ವಿಶೇಷವಾಗಿ ಶಿಕಾರಿಪುರದಲ್ಲಿ ನಡೆಯುವ ಪಾದಯಾತ್ರೆಗೆ ನಾನು ಬಂದೇ ಬರುತ್ತೇನೆ. ಈ ವಿಚಾರವಾಗಿ ನಾಗರಾಜ ಗೌಡ ಅವರಿಗೆ ತಿಳಿಸಿದ್ದೇನೆ. ಎಲ್ಲಿ ಶಾಸಕರಿಲ್ಲವೋ ಆ ಕ್ಷೇತ್ರಗಳಲ್ಲಿ ನಾನು ಪಾದಯಾತ್ರೆ ಮಾಡುತ್ತೇನೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇದು ಬಹಳ ಪ್ರಮುಖವಾದ ವಿಚಾರ” ಎಂದು ಮಾರ್ಗದರ್ಶನ ನೀಡಿದರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...