ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್

Date:

ನಿನ್ನೆಯಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಹಂತದ ನೌಕರರ ಸಂಘಗಳ ಪದಾಧಿಕಾರಿಗಳೊಂದಿಗೆ ಎಸ್‌ ಸುರೇಶ್‌ಕುಮಾರ್ ಸಭೆ ನಡೆಸಿದರು. ಈ ಸಭೆಯ ನಂತರ ಮಾತನಾಡಿದ ಅವರು, ಶಿಕ್ಷಕ ಮಿತ್ರ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ತಂತ್ರಜ್ಞಾನದ ಮೂಲಕ ಪರಿಹಾರ ನೀಡಲಾಗುತ್ತದೆ. 2,500 ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳ ನೇಮಕಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಬ್ಬಂದಿ ಮತ್ತು ಶಿಕ್ಷಕರ ಸಾಕಷ್ಟು ಸಮಸ್ಯೆಗಳಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಆಯುಕ್ತಾಲಯ, ಸಚಿವಾಲಯ ಮತ್ತು ನಿರ್ದೇಶನಾಲಯಗಳಲ್ಲಿ ದೀರ್ಘಾವಧಿಯಿಂದ ಧೂಳಿಡಿದಿರುವ ಕಡತಗಳನ್ನು ಕಾಲ ಮಿತಿಯಲ್ಲಿ ವಿಲೇವಾರಿ ಮಾಡುವಂತೆ ಹಾಗೂ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ, ವೃಂದ ನೇಮಕಾತಿ, ಬಡ್ತಿ, ವೇತನ ತಾರತಮ್ಯ ಸೇರಿ ಸರ್ಕಾರಕ್ಕೆ ಆರ್ಥಿಕ ಹೊರೆಯಾಗದ ಶಿಕ್ಷಕರ ಬೇಡಿಕೆಗಳ ಬಗ್ಗೆ 15 ದಿನಗಳಲ್ಲಿ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...