ಬೆಳಗಾವಿ: ಬೆಳಗಾವಿ ಲೋಕಸಭೆ ಟಿಕೆಟ್ ಜಗದೀಶ್ ಶೆಟ್ಟರ್ ಅವರಿಗೆ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು, ಕೆಲ ಮುಖಂಡರ ಪಟ್ಟು ಹಿಡಿದಿದ್ದಾರೆ. ಇಷ್ಟೇ ಅಲ್ಲದೆ ಟಿಕೆಟ್ ನೀಡುವುದನ್ನು ವಿರೋಧಿಸಿ ದೆಹಲಿಗೆ ಹೋಗಲು ಮುಖಂಡರ ಪ್ಲ್ಯಾನ್ ಮಾಡಿದ್ದಾರೆ.
ಈ ವಿಚಾರವಾಗಿ ಪ್ರಭಾಕರ್ ಕೋರೆ ಮನೆಯಲ್ಲಿ ಶಾಸಕ ಅಭಯ್ ಪಾಟೀಲ್, ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, ಮಹಾಂತೇಶ ಕವಟಗಿಮಠ, ಎಂ.ಬಿ.ಜಿರಲೆ ಸಭೆ ಸೇರಿದ್ದರು. ಸಭೆಯಲ್ಲಿ ರಾಜ್ಯಸಭಾ ಸದಸ್ಯ ಕಡಾಡಿ ನೇತೃತ್ವದಲ್ಲಿ ದೆಹಲಿಗೆ ಹೋಗಲು ಪ್ಲ್ಯಾನ್ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ.