ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಸಚಿವ ಎಂ.ಬಿ. ಪಾಟೀಲ್ ಶತಮೂರ್ಖ ಗೃಹಸಚಿವ ಎಂದು ಟೀಕಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.
ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ಇರಬೇಕು. ಅವರು ಹೆಣ್ಣುಮಕ್ಕಳು ಎಂದು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ. ನಾವು ವಿಜಯಪುರದವರು. ನಮಗೆ ಬೇರೆ ಪದಗಳು ಕೂಡ ಗೊತ್ತು ಎಂದು ಮೈಸೂರಿನಲ್ಲಿ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಹೆಣ್ಣು ಮಕ್ಕಳ ಬಾಯಲ್ಲಿ ಅಂತಹ ಪದಗಳು ಬರಬಾರದು. ಶೋಭಾ ಕರಂದ್ಲಾಜೆ ಹಿನ್ನೆಲೆ, ಸಂಸ್ಕಾರ ಜನರಿಗೆ ಗೊತ್ತಿದೆ. ಅದೇ ರೀತಿ ನಮ್ಮ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿಯ ಬಗ್ಗೆಯೂ ಜನರಿಗೆ ಗೊತ್ತಿದೆ. ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ತಕರಾರು ಇದ್ದರೆ ಶೋಭಾ ಕರಂದ್ಲಾಜೆಯವರು ಸಂಪುಟ ಉಪಸಮಿತಿಯ ಮುಂದೆ ಹೋಗಲಿ.ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.