ಶೋಭಾ ಕರಂದ್ಲಾಜೆಗೆ ಟಾಂಗ್ ಕೊಟ್ಟ ಸಚಿವ ಯು.ಟಿ. ಖಾದರ್ ! ಏನ್ ಹೇಳಿದ್ರು ಗೊತ್ತಾ ?

Date:

ಜಿಲ್ಲೆಯಲ್ಲಿನ ಅಕ್ರಮಗಳಿಗೆ ಸಚಿವ ಯು.ಟಿ. ಖಾದರ್ ಅಭಯ ಹಸ್ತವಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಕ್ಕೆ ಯು.ಟಿ. ಖಾದರ್ ತಿರುಗೇಟು ನೀಡಿದ್ದಾರೆ.ಅನಗತ್ಯವಾಗಿ ಸುಳ್ಳು ಆರೋಪ ಮಾಡಬಾರದು, ಗೊಂದಲ ಸೃಷ್ಟಿಸಿ ಪರಿಸ್ಥಿತಿ ಬಿಗಡಾಯಿಸುವಂತೆ ಅವರು ಮಾತನಾಡಬಾರದು ಎಂದು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ತಮ್ಮ ಕ್ಷೇತ್ರದತ್ತ ಮುಖ ಮಾಡುವುದಿಲ್ಲ. ಅಲ್ಲಿನ ಜನ ಅವರನ್ನು ರಿಜೆಕ್ಟ್ ಮಾಡಿದ್ದರು. ಆದರೆ, ಪ್ರಧಾನಿ ಮೋದಿ ಮುಖ ನೋಡಿ ಅವರನ್ನು ಗೆಲ್ಲಿಸಿದ್ದಾರೆ. ಈ ಬಗ್ಗೆ ಶೋಭಾ ಕರಂದ್ಲಾಜೆ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ನಾನು ಜಿಲ್ಲೆಯ ಸಂಸದರು, ಶಾಸಕರೊಂದಿಗೆ ಮಾತನಾಡುತ್ತೇನೆ. ಹಿರಿಯರು, ಧಾರ್ಮಿಕ ಮುಖಂಡರ ಸಲಹೆ ಕೇಳುತ್ತೇನೆ. ಸರ್ವಪಕ್ಷ, ಸರ್ವಧರ್ಮ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತೇನೆ.ಆ ಸಭೆಗೆ ಬಂದು ಶೋಭಾ ಕರಂದ್ಲಾಜೆ ಸಲಹೆ ಕೊಡಲಿ. ಶೋಭಾ ಕರಂದ್ಲಾಜೆ ಅವರ ಆರೋಪ ಇದೇ ಮೊದಲೇನಲ್ಲ. ಅವರ ಎಲ್ಲಾ ಆರೋಪಗಳಿಗೆ ನಾನು ಉತ್ತರ ಕೊಡಲು ಹೋಗಲ್ಲ. ಎಷ್ಟೇ ಟೀಕಿಸಿದರೂ ನಾನು ಪ್ರತಿಕ್ರಿಯೆ ನೀಡಲ್ಲ. ಅವರು ಸಂಸದರಾಗಿ ನನಗೆ ಸಲಹೆ-ಸೂಚನೆಗಳನ್ನು ಕೊಡಲಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...