No menu items!
14.7 C
Munich
Thursday, July 23, 2026

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

Must read

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಶ್ರೀರಾಮನವಮಿ ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಆ ದಿನ ಎಲ್ಲಾ ಕಸಾಯಿಖಾನೆಗಳನ್ನು ಮುಚ್ಚುವಂತೆ ಜಿಬಿಎ ಸೂಚಿಸಿದ್ದು, ಮಾಂಸ ಮಾರಾಟ ಮಾಡುವ ಅಂಗಡಿಗಳು ಹಾಗೂ ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ. ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಬ್ಬದ ದಿನದ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ನಗರದಲ್ಲಿ ಯಾವುದೇ ಅಕ್ರಮ ಅಥವಾ ಅಸಭ್ಯ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ನಿಗಾವಹಿಸಲಾಗಿದೆ. ಸಾರ್ವಜನಿಕರು ಮತ್ತು ವ್ಯಾಪಾರಿಗಳು ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article