ಸಂಕ್ರಾಂತಿ ಪೂಜೆ ಮಾಡ್ತಿದ್ದ ಸ್ವಾಮೀಜಿಗೆ ಹೃದಯಾಘಾತ

0
38

ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದ ಭೀಮಾ -ಕಾಗಿಣ ನದಿಯ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀಗಳಿಗೆ ಹೃದಯಾಘಾತವಾಗಿದೆ.

ಕೂಡಲೇ ಅವರನ್ನು ನದಿಯಿಂದ ಹೊರಗೆ ಕರೆ ತರುವಷ್ಟರಲ್ಲಿ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. 58 ವರ್ಷದ ಶ್ರೀಗಳ ಹಠಾತ್ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here