ಸಂಜನಾ ಬಂದ್ರು, ಬೂಮ್ರಾ ಎಲ್ಲಿ?

Date:

ಭಾರತ ತಂಡದ ಸ್ಟಾರ್‌ ವೇಗದ ಬೌಲರ್‌ ಗೋವಾದಲ್ಲಿ ಮಾರ್ಚ್ 15ರಂದು ನಡೆದ ಖಾಸಗಿ ಸಮಾರಂಭದಲ್ಲಿ ಕ್ರೀಡಾ ನಿರೂಪಕಿ ಸಂಜನಾ ಗಣೇಶನ್‌ ಅವರನ್ನು ವಿವಾಹವಾಗಿದ್ದರು. ಇದರಿಂದಲೇ ಭಾರತ ಕ್ರಿಕೆಟ್‌ ತಂಡದ ಸೇವೆಯಿಂದ ದೂರ ಉಳಿದಿದ್ದಾರೆ.

ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಒಳಗೊಂಡಂತೆ ಕೇವಲ 20 ಜನರ ಸಮ್ಮುಖದಲ್ಲಿ ಜಸ್‌ಪ್ರೀತ್‌ ಮತ್ತು ಸಂಜನಾ ಅವರ ವಿವಾಹ ಮಹೋತ್ಸವ ನಡೆದಿತ್ತು.

ಅಂದಹಾಗೆ ವಿವಾಹವಾದ ಎರಡೇ ವಾರದಲ್ಲಿ ಕ್ರೀಡಾ ನಿರೂಪಕಿ ಸಂಜನಾ ಗಣೆಶನ್ ತಮ್ಮ ಕೆಲಸಕ್ಕೆ ಹಾಜರಾಗಿದ್ದಾರೆ. ಶುಕ್ರವಾರ ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ (ಎಂಸಿಎ) ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್‌ ನಡುವಣ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ 2ನೇ ಹಣಾಹಣಿಗೆ ಸಂಜನಾ ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಗೆ ನಿರೂಪಣೆ ಕೆಲಸ ನಿಭಾಯಿಸಿದ್ದರು.

ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯಲ್ಲಿ ಮಾಜಿ ಕ್ರಿಕೆಟಿಗರಾದ ವಿವಿಎಸ್‌ ಲಕ್ಷ್ಮಣ್ ಮತ್ತು ಇರ್ಫಾನ್ ಪಠಾಣ್‌ ಅವರೊಟ್ಟಿಗೆ ಸಂಜನಾ ಕಾಣಿಸಿಕೊಳ್ಳುತ್ತಿದ್ದಂತೆಯೇ ಚುರುಕಾದ ಅಭಿಮಾನಿಗಳು, ಸೋಷಿಯಲ್‌ ಮೀಡಿಯಾದಲ್ಲಿ ಬುಮ್ರಾ ಎಲ್ಲಿ? ಎಂದು ಪ್ರಶ್ನೆ ಮಾಡಿದ್ದಾರೆ. ಸಂಜನಾ ಕೆಲಸಕ್ಕೆ ಮರಳಿ ಆಗಿದೆ, ಜಸ್‌ಪ್ರೀತ್‌ ಎಲ್ಲಿದ್ದಾರೆ? ಒಬ್ಬರೇ ಹನಿಮೂನ್ ನಾಡಿಕೊಳ್ಳುತ್ತಿದ್ದಾರ ಹೇಗೆ? ಎಂದೆಲ್ಲಾ ಫ್ಯಾನ್ಸ್‌ ಟೀಮ್ ಇಂಡಿಯಾ ವೇಗಿಯ ಕಾಲನ್ನು ಎಳೆದಿದ್ದಾರೆ.

ಸ್ಟಾರ್‌ ಸ್ಪೋರ್ಟ್ಸ್‌ ವಾಹಿನಿಯಲ್ಲಿ ಮಾಜಿ ಕ್ರಿಕೆಟಿಗರಾದ ವಿವಿಎಸ್‌ ಲಕ್ಷ್ಮಣ್ ಮತ್ತು ಇರ್ಫಾನ್ ಪಠಾಣ್‌ ಅವರೊಟ್ಟಿಗೆ ಸಂಜನಾ ಕಾಣಿಸಿಕೊಳ್ಳುತ್ತಿದ್ದಂತೆಯೇ ಚುರುಕಾದ ಅಭಿಮಾನಿಗಳು, ಸೋಷಿಯಲ್‌ ಮೀಡಿಯಾದಲ್ಲಿ ಬುಮ್ರಾ ಎಲ್ಲಿ? ಎಂದು ಪ್ರಶ್ನೆ ಮಾಡಿದ್ದಾರೆ. ಸಂಜನಾ ಕೆಲಸಕ್ಕೆ ಮರಳಿ ಆಗಿದೆ, ಜಸ್‌ಪ್ರೀತ್‌ ಎಲ್ಲಿದ್ದಾರೆ? ಒಬ್ಬರೇ ಹನಿಮೂನ್ ನಾಡಿಕೊಳ್ಳುತ್ತಿದ್ದಾರ ಹೇಗೆ? ಎಂದೆಲ್ಲಾ ಫ್ಯಾನ್ಸ್‌ ಟೀಮ್ ಇಂಡಿಯಾ ವೇಗಿಯ ಕಾಲನ್ನು ಎಳೆದಿದ್ದಾರೆ.

ಕಳೆದ ತಿಂಗಳು ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯದಿಂದಲೇ ಟೀಮ್ ಇಂಡಿಯಾ ಸೇವೆಯಿಂದ ದೂರ ಉಳಿದ ಬುಮ್ರಾ, ಮುಂಬರುವ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಹಿಂದಿರುಗುವ ಸಾಧ್ಯತೆ ಇದೆ. ಏಪ್ರಿಲ್ 9ರಂದು ನಡೆಯಲಿರುವ ಐಪಿಎಲ್‌ 2021 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಎದುರು ಮುಂಬೈ ಇಂಡಿಯನ್ಸ್‌ ಪರ ಬುಮ್ರಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ಸಂಜನಾ ಗಣೇಶನ್‌, ಇಂಗ್ಲೆಂಡ್‌ ವಿರುದ್ಧದ ಸರಣಿ ನಂತರ ಇಂಡಿಯನ್ ಪ್ರೀಮಿಯರ್‌ ಲೀಗ್‌ಗೆ ಸಜ್ಜಾಗಲಿದ್ದಾರೆ. ಐಪಿಎಲ್‌ನಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ನಿರೂಪಕಿಯಾಗಿ ಸಂಜನಾ ಕೆಲಸ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...