ಸಂಜನಾ ಭಾವುಕ ಸಂದೇಶ

Date:

ಸಂಜನಾ ಭಾವುಕ ಸಂದೇಶ

ಡ್ರಗ್ಸ್ ವಿಚಾರದಡಿ ಸದ್ಯ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿರುವ ನಟಿ ಸಂಜನಾ ಗಲ್ರಾನಿ ಅವರು ಅಭಿಮಾನಿಗಳಿಗೆ ವಿಶೇಷ ಸಂದೇಶ ನೀಡಿದ್ದಾರೆ. ಅನೇಕ ದಿನಗಳ ನಂತರದಲ್ಲಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ.
‘ನನಗೆ ಮೆಸೇಜ್ ಕಳಿಸಿರುವ ಪ್ರತಿಯೊಬ್ಬ ವ್ಯಕ್ತಿಗೂ ಧನ್ಯವಾದಗಳು. ನಾನು ಪ್ರತಿಯೊಂದು ಮೆಸೇಜ್ ಓದಿರುವೆ. ನಿಮ್ಮ ಅಮೂಲ್ಯವಾದ ಕಾಳಜಿ ನೋಡಿ ಪುಣ್ಯ ಮಾಡಿದ್ದೇನೆ ಅನಿಸಿತು. 1 ಮಿಲಿಯನ್ ಫಾಲೋವರ್ಸ್‌ಗೆ ಧನ್ಯವಾದ. ಆರೋಗ್ಯ ಸುಧಾರಿಸುತ್ತಿದ್ದಂತೆ ಸೋಶಿಯಲ್ ಮೀಡಿಯಾಗೆ ಮರಳುತ್ತೇನೆ. ನಿಮ್ಮ ಪ್ರೀತಿಗೆ, ವಿಶೇಷವಾಗಿ ನನ್ನ ಕುಟುಂಬಕ್ಕೆ, ಸ್ನೇಹಿತರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು’ ಎಂದು ಸಂಜನಾ ಗಲ್ರಾನಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ.
ಈಗ ಸಂಜನಾ ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಸಹೋದರಿ ನಿಕ್ಕಿ ಗಲ್ರಾನಿ ಹುಟ್ಟುಹಬ್ಬದ ಪ್ರಯುಕ್ತ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದರು. ಈ ಮೂಲಕ ಅವರು ಸೋಶಿಯಲ್ ಮೀಡಿಯಾಕ್ಕೆ ಕಂಬ್ಯಾಕ್ ಮಾಡಿದ್ದಾರೆ. ನಿಕ್ಕಿ ಗಲ್ರಾನಿ ಕೂಡ ಖ್ಯಾತ ನಟಿ, ಈಗ ಅವರು ತೆಲುಗು, ತಮಿಳು ಭಾಷೆಯ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.
ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಸಂಜನಾ ಗಲ್ರಾನಿ ಅವರನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 9ರಂದು ವಶಕ್ಕೆ ಪಡೆದಿದ್ದರು. ತದನಂತರದಲ್ಲಿ ಅವರನ್ನು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಗಿತ್ತು. ಮೂರು ತಿಂಗಳ ಜೈಲುವಾಸದ ನಂತರದಲ್ಲಿ ಸಂಜನಾಗೆ ಕರ್ನಾಟಕ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಆದರೆ ಆರಂಭದಲ್ಲಿ ಎರಡು ಬಾರಿ ಅವರಿಗೆ ಜಾಮೀನು ತಿರಸ್ಕರಿಸಲಾಗಿತ್ತು.

Share post:

Subscribe

spot_imgspot_img

Popular

More like this
Related

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ: ವಿಜಯೇಂದ್ರ

ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ:...

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು ಎಷ್ಟಿದೆ ದರ?

Gold Price Today: ಚಿನ್ನದ ದರದಲ್ಲಿ ಭಾರಿ ಕುಸಿತ; ಬೆಂಗಳೂರಿನಲ್ಲಿ ಇಂದು...

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ

ಬೆಂಗಳೂರಿನಲ್ಲಿ ತೀವ್ರ ಕುಸಿತ ಕಂಡ ಗಾಳಿಯ ಗುಣಮಟ್ಟ: ಹೆಚ್ಚಿದ ಆರೋಗ್ಯ ಸಮಸ್ಯೆ ಬೆಂಗಳೂರು:...

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ!

ನಿಂಬೆ ಬಳಸಿದ ನಂತರ ಸಿಪ್ಪೆ ಎಸೆಯಬೇಡಿ, ಪ್ರಯೋಜನ ಸಾಕಷ್ಟಿವೆ! ನಿಂಬೆಹಣ್ಣು ಕೇವಲ ರಸಕ್ಕಾಗಿ...