ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ: ದಿನೇಶ್ ಗುಂಡೂರಾವ್

Date:

ಬೆಂಗಳೂರು: ಅಂಗಾಂಗ ದಾನವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿಯನ್ನು ನೀಡಿದ್ದು, ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನೀತಿಯನ್ನು ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದಾರೆ.

ಈ ಕುರಿತಾಗಿ ಟ್ವೀಟ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ‘ಅಂಗಾಂಗ ದಾನ’ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳನ್ನು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗೂ ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಸರ್ಕಾರವು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...