No menu items!
15.1 C
Munich
Wednesday, May 6, 2026

ಸಚಿವರು, ಡಿಸಿಎಂ ಯಾರೇ ವಿರೋಧ ಮಾಡಿದ್ರೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು !

Must read

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲಿಂಗಾಯತರು, ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಗೆ 162 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಸರ್ಕಾರ ವರದಿ ತರಿಸಿಕೊಂಡು ನಂತರ ತೀರ್ಮಾನಿಸಲಿದೆ ಎಂದರು.
ನಾವು 162 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ವರದಿ ತೆಗೆದುಕೊಳ್ಳಬೇಕು. ಅವರಿಗೆ (ವೊಕ್ಕಲಿಗರಿಗೆ) ಇರುವ ಅನುಮಾನಗಳು ವರದಿಯಲ್ಲಿವೆಯೇ ಇಲ್ಲವೇ ಎಂಬುದನ್ನು ನೋಡಬೇಕು. ನಾನು ವರದಿಯನ್ನು ನೋಡಿಲ್ಲ. ನಾನೇ ನೋಡದಿದ್ದರೆ ಬೇರೆಯವರು ಅದನ್ನು ಹೇಗೆ ನೋಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವರದಿ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ವರದಿ ಸಲ್ಲಿಸುವವರೆಗೆ ಒಬಿಸಿ ಆಯೋಗದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article