ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

Date:

ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಹೈಕಮಾಂಡ್ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ರೂ ಚರ್ಚೆ ಮಾಡಬಹುದೇನೋ.? ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಅವರು ದೆಹಲಿಗೆ ಹೋಗಿದ್ದಾರೆ. ಯಾಕೆ ಅಂತ ಗೊತ್ತಿಲ್ಲ. ಇಲಾಖೆ ವಿಚಾರಣೆನಾ, ಪಕ್ಷದ ವಿಚಾರಣೆನಾ ಅಂತ ಗೊತ್ತಿಲ್ಲ. ಇವತ್ತು ಸಿಎಂ ದೆಹಲಿಗೆ ಹೋಗ್ತಿದ್ದಾರೆ. ವರ್ಕಿಂಗ್ ಕಮಿಟಿಗಳ ಸಭೆ ನಾಳೆ ಇದೆ. ಸಾಮಾನ್ಯವಾಗಿ ಈ ಸಭೆಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರನ್ನು ಕರೀತಾರೆ. ಇದಾದ ನಂತರ ಹೈಕಮಾಂಡ್ ಅವರ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ಬರೂ ಚರ್ಚೆ ಮಾಡಬಹುದೇನೋ ಎಂದರು‌.
ದರ ಜತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗೂ ಇದೆ. ಅಲ್ಲಲ್ಲೇ ಮಾತುಗಳು ಕೇಳಿ ಬರುತ್ತಿವೆ. ಈ ಎರಡೂ ವಿಚಾರಗಳ ಬಗ್ಗೆಯೂ ಸಿಎಂ, ಡಿಸಿಎಂ ಚರ್ಚೆ ಮಾಡಿ ಏನು ತೀರ್ಮಾನ ಮಾಡ್ಕೊಂಡು ಬರ್ತಾರೆ ಅಂತ ಗೊತ್ತಿಲ್ಲ. ಖಾತೆ ಬದಲಾವಣೆ ಬಗ್ಗೆಯೂ ಏನು ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ಇಷ್ಟು ಕಾಲ ವರಿಷ್ಠರು ಏನೆಲ್ಲ ಜವಾಬ್ದಾರಿ ಕೊಟ್ಟಿದ್ದಾರೋ ಅವುಗಳನ್ನೆಲ್ಲ ನಿಭಾಯಿಸಿಕೊಂಡು ಬಂದಿದ್ದೇನೆ. ಈಗಲೂ ಅವರು ಏನೇ ಜವಾಬ್ದಾರಿ ಕೊಟ್ಟರೂ ಮಾಡೋದಿಕ್ಕೆ ನಾನು ತಯಾರಾಗಿರುತ್ತೇನೆ. ಪಕ್ಷದ ಸೂಚನೆ 35 ವರ್ಷಗಳಿಂದ ಪಾಲಿಸಿಕೊಂಡೇ‌ ಬಂದಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...