No menu items!
20.6 C
Munich
Friday, July 31, 2026

ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

Must read

ಸಚಿವ ಸಂಪುಟ ಪುನಾರಚನೆ ವಿಚಾರ: ಡಾ.ಜಿ ಪರಮೇಶ್ವರ್ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ಹೈಕಮಾಂಡ್ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ರೂ ಚರ್ಚೆ ಮಾಡಬಹುದೇನೋ.? ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಸಿಎಂ ಅವರು ದೆಹಲಿಗೆ ಹೋಗಿದ್ದಾರೆ. ಯಾಕೆ ಅಂತ ಗೊತ್ತಿಲ್ಲ. ಇಲಾಖೆ ವಿಚಾರಣೆನಾ, ಪಕ್ಷದ ವಿಚಾರಣೆನಾ ಅಂತ ಗೊತ್ತಿಲ್ಲ. ಇವತ್ತು ಸಿಎಂ ದೆಹಲಿಗೆ ಹೋಗ್ತಿದ್ದಾರೆ. ವರ್ಕಿಂಗ್ ಕಮಿಟಿಗಳ ಸಭೆ ನಾಳೆ ಇದೆ. ಸಾಮಾನ್ಯವಾಗಿ ಈ ಸಭೆಗೆ ಸಿಎಂ, ಕೆಪಿಸಿಸಿ ಅಧ್ಯಕ್ಷರನ್ನು ಕರೀತಾರೆ. ಇದಾದ ನಂತರ ಹೈಕಮಾಂಡ್ ಅವರ ಜತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ಬರೂ ಚರ್ಚೆ ಮಾಡಬಹುದೇನೋ ಎಂದರು‌.
ದರ ಜತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗೂ ಇದೆ. ಅಲ್ಲಲ್ಲೇ ಮಾತುಗಳು ಕೇಳಿ ಬರುತ್ತಿವೆ. ಈ ಎರಡೂ ವಿಚಾರಗಳ ಬಗ್ಗೆಯೂ ಸಿಎಂ, ಡಿಸಿಎಂ ಚರ್ಚೆ ಮಾಡಿ ಏನು ತೀರ್ಮಾನ ಮಾಡ್ಕೊಂಡು ಬರ್ತಾರೆ ಅಂತ ಗೊತ್ತಿಲ್ಲ. ಖಾತೆ ಬದಲಾವಣೆ ಬಗ್ಗೆಯೂ ಏನು ತೀರ್ಮಾನ ಮಾಡ್ತಾರೋ ಗೊತ್ತಿಲ್ಲ. ಇಷ್ಟು ಕಾಲ ವರಿಷ್ಠರು ಏನೆಲ್ಲ ಜವಾಬ್ದಾರಿ ಕೊಟ್ಟಿದ್ದಾರೋ ಅವುಗಳನ್ನೆಲ್ಲ ನಿಭಾಯಿಸಿಕೊಂಡು ಬಂದಿದ್ದೇನೆ. ಈಗಲೂ ಅವರು ಏನೇ ಜವಾಬ್ದಾರಿ ಕೊಟ್ಟರೂ ಮಾಡೋದಿಕ್ಕೆ ನಾನು ತಯಾರಾಗಿರುತ್ತೇನೆ. ಪಕ್ಷದ ಸೂಚನೆ 35 ವರ್ಷಗಳಿಂದ ಪಾಲಿಸಿಕೊಂಡೇ‌ ಬಂದಿದ್ದೇನೆ ಎಂದರು.

- Advertisement -spot_img

More articles

- Advertisement -spot_img

Latest article