No menu items!
2.7 C
Munich
Friday, May 1, 2026

ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ

Must read

ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣ: ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ

ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ. ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿಯಾಗಿದ್ದು, ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48ವರ್ಷ) ಅವರು ಫೆಬ್ರವರಿ 14ರಂದು ರಾತ್ರಿ 11ಗಂಟೆ ಸುಮಾರಿಗೆ ಮಿರಜ್ ದಿಂದ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು.
ಮರುದಿನ ಫೆಬ್ರವರಿ 15 ರಂದು ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು “ಐದು ಕೋಟಿ ಹಣ ನೀಡಿ ನಿನ್ನ ಬಿಡಿಸಿಕೊಂಡು ಹೋಗುವಂತೆ” ಹೇಳಿದ್ದರು.
ಈ ಕಿಡ್ನಾಪ್ ಪ್ರಕರಣ ಪೊಲೀಸರ ನಿದ್ದೆಗೆಡಸಿತ್ತು. ಪ್ರಕರಣ ದಾಖಲಾದ ಕೇವಲ 24ಗಂಟೆಯಲ್ಲಿ ಘಟಪ್ರಭಾ ಪೊಲೀಸರು ಪ್ರಕರಣವನ್ನ ಭೇದಿಸಿದ್ದು ಐವರು ಜನ ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಉದ್ಯಮಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -spot_img

More articles

- Advertisement -spot_img

Latest article