ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

Date:

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಬಗ್ಗೆ ಕೇಳಿದಾಗ, “ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ.
ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು – ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...