No menu items!
8 C
Munich
Saturday, May 2, 2026

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

Must read

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.
ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಬಗ್ಗೆ ಕೇಳಿದಾಗ, “ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ.
ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು – ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article