ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು: ಬಸವರಾಜ ಹೊರಟ್ಟಿ

tnit editors
1 Min Read

ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು: ಬಸವರಾಜ ಹೊರಟ್ಟಿ

ಬೆಂಗಳೂರು: ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು. ಅದು ಅವರ ಅಧಿಕಾರ ಮತ್ತು ಹಕ್ಕು ಎರಡೂ ಇಲ್ಲ. ಎಫ್ಐಆರ್ ಆಗಿದೆ,
ನಮ್ಮದೇ ಮೂಲಗಳ ಪ್ರಕಾರ ಚರ್ಚೆ ಮಾಡುತ್ತೇವೆ. ಆದರೆ ಪೊಲೀಸರು ಒಳಗೆ ಬಂದಿಲ್ಲ. ನಮ್ಮಲ್ಲಿ ವೀಡಿಯೋ, ಆಡಿಯೋ ಇದ್ದರೆ ಮಾತ್ರ ಪರಿಗಣನೆ ಮಾಡುತ್ತೇವೆ. ಬೇರೆ ಯಾರಾದರೂ ಕಳುಹಿಸಿದರೆ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸುತ್ತೇವೆ. ಸದನ ಮುಗಿದ ಮೇಲೆ ಯಾವುದೇ ವೀಡಿಯೋ ಚಿತ್ರೀಕರಣ ಆಗಿಲ್ಲ ಎಂದು ಹೊರಟ್ಟಿ ಹೇಳಿದರು.

Share This Article