ಸರಸವಾಡುತ್ತಿದ್ದಾಗ ನಡೆಯಿತು ಜಗಳ…ಬೆತ್ತಲೆ ಇದ್ದ ಪ್ರಿಯಕರನನ್ನು ಕೊಂದು ನಗ್ನವಾಗಿ ತಿರುಗಿದಳು ಪ್ರಿಯತಮೆ!

Date:

ಹಾಸನ : ಮಹಿಳೆಯೊಬ್ಬಳು ಸರಸವಾಡುವಾಗಲೇ ಜಗಳವಾಡಿ ಬೆತ್ತಲೆಯಿದ್ದ ಪ್ರಿಯಕರನನ್ನು ಕೊಲೆಗೈದು ಆಕೆಯೂ ಬೆತ್ತಲಾಗಿಯೇ ಓಡಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಆರೋಪಿ ಮಹಿಳೆ ಬೆತ್ತಲಾಗಿ ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಡಿಸೆಂಬರ್ 1ರ ರಾತ್ರಿ ಹೊಳೆನರಸೀಪುರದ ಮಳಿಗೆ ಆವರಣದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿ ಆಧಾರದ ಮೇರೆಗೆ ಪೆÇಲೀಸರು ಹತ್ಯೆ ಪ್ರಕರಣ ಬೇಧಿಸಿದ್ದಾರೆ. ಕೂಲಿ ಕೆಲಸ ಮಾಡಿಕೊಂಡಿದ್ದ ಅರಕಲಗೂಡು ತಾಲೂಕಿನ ಬಸವಾಪಟ್ಟಣ ನಿವಾಸಿ ಮಂಜು (43) ಮೃತ ದುರ್ದೈವಿ. ಹೊಳೆನರಸೀಪುರದ ವಸಂತಾ ಆರೋಪಿ.

ವಸಂತಾ ಹಾಗೂ ಮಂಜು ನಡುವೆ ಅನೈತಿಕ ಸಂಬಂಧವಿತ್ತು. ರಾತ್ರಿ ಒಟ್ಟಿಗೇ ಇಬ್ಬರು ಕುಡಿದು, ತಿಂದು ಸರಸದಲ್ಲಿ ತೊಡಗಿದ್ದರು. ಇಬ್ಬರು ಬೆತ್ತಲಾಗಿಯೇ ಬಡಿದಾಡಿಕೊಂಡಿದ್ದು, ವಸಂತಾ ದೊಣ್ಣೆಯಿಂದ ಮಂಜು ತಲೆಗೆ ಹೊಡೆದು ಬೆತ್ತಲಾಗಿ ಸುತ್ತಿದ್ದಾಳೆ.

ಪುರಸಭೆ ಮಳಿಗೆ ಮುಂದೆ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿಯೇ ಮಂಜು ಮೃತದೇಹ ಪತ್ತೆಯಾಗಿತ್ತು. ಸ್ಥಳೀಯ ಸಿಸಿಟಿವಿ ದೃಶ್ಯ, ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸಿಪಿಐ ಅಶೋಕ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

Share post:

Subscribe

spot_imgspot_img

Popular

More like this
Related

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...