No menu items!
15.4 C
Munich
Monday, June 15, 2026

ಸರ್ಕಾರಿ ಟೀಚರ್ ಎಡವಟ್ಟಿಗೆ ಕತ್ತಲಿನಲ್ಲಿ ಬಾಲಕನ ಬದುಕು: ಗೋಳಾಡುತ್ತಿರುವ ಪೋಷಕರು!

Must read

ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ಸರ್ಕಾರಿ ಶಾಲೆಯೊಂದರ ಟೀಚರ್ ಎಡವಟ್ಟಿಗೆ ಬಾಲಕನೋರ್ವ ತನ್ನ ಕಣ್ಣುಗಳಲ್ಲೇ ಕಳೆದುಕೊಂಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು ವಿದ್ಯಾರ್ಥಿಯ ಕಣ್ಣನ್ನು ಕಳೆದುಕೊಳ್ಳುವಂತೆ ಮಾಡಿದೆ. ಶಿಕ್ಷಕಿಯ ಏಟಿಗೆ 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದ್ದು, ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.

ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶವಂತ್ ದೃಷ್ಟಿ ಕಳೆದುಕೊಂಡ ಬಾಲಕ. ಒಂದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಇದೇ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿ ಸರಸ್ವತಿ ಕುಳಿತ ಜಾಗದಿಂದಲೇ ಕೋಲು ಬೀಸಿದ್ದಾಳೆ, ಇದರ ಪರಿಣಾಮ ನೇರವಾಗಿ ಕೋಲು ಯಶ್ವಂತ್ ಕಣ್ಣಿಗೆ ಬಿದ್ದು ಗಾಯಗೊಂಡಿದ್ದ. ಅಂದಿನಿಂದ ಪೋಷಕರು ಎಲ್ಲ ಕಡೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇದುವರೆಗೂ ಶಸ್ತ್ರ ಚಿಕಿತ್ಸೆ ಫಲಕಾರಿಯಾಗಿಲ್ಲ. ಇದ್ರಿಂದ ಒಂದು ವರ್ಷದ ನಂತರ ಬಾಲಕನ ದೃಷ್ಟಿ ಕಾಣದಾಗಿದೆ.

- Advertisement -spot_img

More articles

- Advertisement -spot_img

Latest article