ಸರ್ಕಾರ ಮಾಡಬೇಕಿದ್ದನ್ನು ತಮ್ಮ ಸ್ವಂತ ದುಡ್ಡಿನಲ್ಲಿ ಮಾಡಿದ ಸುಮಲತಾ

Date:

ಕರ್ನಾಟಕದಾದ್ಯಂತ ಪ್ರಸ್ತುತ ಭಾರೀ ಚರ್ಚೆಗೀಡಾಗಿರುವ ವಿಷಯವೆಂದರೆ ಅದು ಆಕ್ಸಿಜನ್ ಕೊರತೆಯ ವಿಷಯ. ಮೊನ್ನೆಯಷ್ಟೇ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ಬರೋಬ್ಬರಿ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟರು ಮತ್ತು ಹುಬ್ಬಳ್ಳಿಯಲ್ಲಿಯೂ ಸಹ 5 ಜನ ಸೋಂಕಿತರು ಮೃತಪಟ್ಟರು. ಇಷ್ಟು ದಾರುಣ ಮಟ್ಟಕ್ಕೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವುಗಳು ಉಂಟಾಗುತಿದ್ದು ಪ್ರತಿ ಜಿಲ್ಲೆಗಳಲ್ಲಿಯೂ ಸಹ ಆಕ್ಸಿಜನ್ ಕೊರತೆ ತಲೆದೋರಿದೆ.

 

ಇಷ್ಟು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ಸಿಜನ್ ಕೊರತೆ ಇಲ್ಲ ಎಂದು ಹೇಳಲಾಗುತ್ತಿತ್ತು ಆದರೆ ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿಯೂ ಸಹ ಆಕ್ಸಿಜನ್ ಕೊರತೆ ಉಂಟಾಗಿದೆ. ಈ ವಿಷಯದಿಂದ ಎಚ್ಚೆತ್ತ ಮಂಡ್ಯ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ವಂತ ದುಡ್ಡಿನಲ್ಲಿ 2 ಸಾವಿರ ಲೀಟರ್ ಆಕ್ಸಿಜನ್ ಅನ್ನು ಮಂಡ್ಯ ಜಿಲ್ಲೆಗೋಸ್ಕರ ಖರೀದಿಸಿದ್ದಾರೆ.

 

ಸರ್ಕಾರ ಆಕ್ಸಿಜನ್ ಸರಬರಾಜು ಮಾಡುವವರೆಗೆ ಕಾಯದ ಸುಮಲತಾ ಅಂಬರೀಷ್ ಮಂಡ್ಯ ಜನರ ಕ್ಷೇಮಕ್ಕಾಗಿ ಇರಿಸುವ ಕೆಲಸವನ್ನು ಮಾಡಿದ್ದು ಜನರಿಂದ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಹಾಗೂ ಇನ್ನೊಂದೆಡೆ 2 ತಿಂಗಳುಗಳಿಂದ ಮಂಡ್ಯ ಜಿಲ್ಲೆಯತ್ತ ತಲೆಯನ್ನು ಹಾಕದಿದ್ದ ಸುಮಲತಾ ಅವರು ದಿಢೀರನೆ ಈ ರೀತಿಯ ಕೆಲಸ ಮಾಡುತ್ತಿರುವುದು ಆರೋಪಗಳಿಂದ ತಪ್ಪಿಸಿಕೊಳ್ಳಲು ಎಂಬ ಮಾತುಗಳು ಹರಿದಾಡುತ್ತಿವೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...