ಸಹಕಾರಿ ಬ್ಯಾಂಕ್ ಗಳಿಗೆ ‘253 ಕೋಟಿ ಬಾಕಿ.? ಸಾಲದ ಸುಳಿಯಲ್ಲಿ ಬೆಳಗಾವಿ ಸಾಹುಕಾರ ‘ರಮೇಶ್ ಜಾರಕಿಹೊಳಿ’

Date:

ಕಾಂಗ್ರೆಸ್ ನಿಂದ ಬಂಡಾಯ ಸಾರಿದ್ದ ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಇದೀಗ ಸಾಲದ ಸುಳಿಯಲ್ಲಿ ಸಿಲುಕಿ, ಸೈಲೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೇ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ 253 ಕೋಟಿ ರೂ ಸಾಲ ಬಾಕಿ ಇದೆ. ಈ ಬಗ್ಗೆ ಕಳೆದ ಆರು ತಿಂಗಳ ಹಿಂದೆಯೇ ಅಪೆಕ್ಸ್ ಬ್ಯಾಂಕ್ ನಿಂದ ಸಾಲ ಮರುಪಾವತಿಗಾಗಿ ನೋಟಿಸ್ ಕಳುಹಿಸಲಾಗಿದೆ.

 

ಅಂದಹಾಗೇ ಅಪೆಕ್ಸ್ ಬ್ಯಾಂಕ್ ಬೆಂಗಳೂರಿನಲ್ಲಿ 119 ಕೋಟಿ, ಡಿಸಿಸಿ ಬ್ಯಾಂಕ್ ತುಮಕೂರಿನಿಂದ 31 ಕೋಟಿ, ಸೌಥ್ ಕೆನರಾ ಡಿಸಿಸಿ ಬ್ಯಾಂಕ್ ಮಂಗಳೂರು 31 ಕೋಟಿ, ಡಿಸಿಸಿ ಬ್ಯಾಂಕ್ ಶಿರಸಿ 31 ಕೋಟಿ ಸಾಲ ಪಡೆದಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸಾಲ ಪಡೆದುಕೊಂಡಿರುವ ರಮೇಶ್ ಜಾರಕಿಹೊಳಿ, ಸಾಲ ಮರುಪಾವತಿ ಮಾಡದ ಹಿನ್ನಲೆಯಲ್ಲಿ ಸಕ್ಕರೆ ಕಾರ್ಖಾನೆ ಮುಟ್ಟುಗೋಲು ಹಾಕಲು ಅಪೆಕ್ಸ್ ಬ್ಯಾಂಕ್ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆ ಉಳಿಸಿಕೊಳ್ಳಲು ಸರ್ಕಾರದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ, ಸದ್ಯಕ್ಕೆ ಆಪರೇಷನ್ ಕಮಲದಿಂ ದೂರ ಉಳಿಯಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ಬಂಡಾಯ ಶಾಸಕರೆನಿಸಿಕೊಂಡಿದ್ದ ರಮೇಶ್ ಜಾರಕಿಹೊಳಿ ಸೈಲೆಂಟ್ ಆಗಿದ್ದಾರೆ ಎನ್ನಲಾಗಿದೆ.
ಅದೇನೆ ಆಗಲಿ, ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಸಾಲ ಪಡೆದ ಹಣ, ಸಕ್ಕರೆ ಮಾರಿದ ಹಣ ಎಲ್ಲಿ ಹೋಯ್ತು.? ರೈತರಿಗೆ ಕೊಡಬೇಕಾದ ಬಾಕಿ ಹಣ ಕೊಡಿಸಿ, ನಮ್ಮ ಕಷ್ಟವನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂಬುದು ಜಿಲ್ಲೆಯ ಕಬ್ಬು ಬೆಳಗಾರರ ಮನವಿಯಾಗಿದೆ.

Share post:

Subscribe

spot_imgspot_img

Popular

More like this
Related

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...