ಸಿಖ್‌ ಸಂಪ್ರದಾಯದಂತೆ ನೆರವೇರಿದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ

Date:

ಸಿಖ್‌ ಸಂಪ್ರದಾಯದಂತೆ ನೆರವೇರಿದ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ

ನವದೆಹಲಿ: ದೇಶದ ಮಾಜಿ ಪ್ರಧಾನಿ, ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ದೆಹಲಿಯ ನಿಗಮ ಬೋಧ್ ಘಾಟ್‌ನಲ್ಲಿ ಸಿಖ್‌ ಸಂಪ್ರದಾಯದಂತೆ ನೆರವೇರಿತು. ಅಂತ್ಯಸಂಸ್ಕಾರದ ವೇಳೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.
ಅಂತ್ಯಕ್ರಿಯೆಗೂ ಮುನ್ನ ಡಾ. ಸಿಂಗ್‌ ಅವರಿಗೆ ಮೂರು ಸೇನಾ ಪಡೆಗಳು ಗೌರವ ಸಮರ್ಪಣೆ ಮಾಡಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮನಮೋಹನ್‌ ಸಿಂಗ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವನ್ನಿರಿಸಿ ಗೌರವ ನಮನ ಸಲ್ಲಿಸಿದರು.
ಬಳಿಕ ಸಿಂಗ್‌ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಈ ನಡುವೆ ‘ಮನಮೋಹನ್‌ ಸಿಂಗ್‌ ಅಮರ್‌ ರಹೇ.. ಅಮರ್‌ ರಹೇ’ ಎಂದು ಘೋಷಣೆ ಕೂಗಲಾಯಿತು. ನಂತರ ಸಿಖ್‌ ಸಂಪ್ರದಾಯದ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಿತು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಥೈರಾಯ್ಡ್ ರೋಗಿಗಳು ಆಹಾರದ ಬಗ್ಗೆ ಹೆಚ್ಚು ಜಾಗ್ರತೆ !

ಚಳಿಗಾಲದಲ್ಲಿ ಥೈರಾಯ್ಡ್ ರೋಗಿಗಳು ಆಹಾರದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕುಚಳಿಗಾಲ ಆರಂಭವಾಗುತ್ತಿದ್ದಂತೆ...

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...