ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಏನಂದ್ರು ಗೊತ್ತಾ?

Date:

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರವಾಣಿ ಮೂಲಕ ಸಮಾಲೋಚಿಸಿದರು.

ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಾಹುಲ್ ಗಾಂಧಿಗೆ ಎರಡು ದಿನಗಳ ಹಿಂದೆ ಸಿದ್ದರಾಮಯ್ಯ ಕರೆ ಮಾಡಿದ್ದರು. ಈ ಸಂದರ್ಭ ರಾಹುಲ್ ಗಾಂಧಿ ಕರೆ ಸ್ವೀಕರಿಸಿರಲಿಲ್ಲ.

ಎರಡು ದಿನದ ಬಳಿಕ ಇಂದು ರಾಹುಲ್ ಗಾಂಧಿ ಮರಳಿ ಕರೆ ಮಾಡಿ ಸಿದ್ದರಾಮಯ್ಯ ಜೊತೆ ಸಮಾಲೋಚಿಸಿದ್ದಾರೆ. ತಮ್ಮ ಆರೋಗ್ಯ ಸುಧಾರಿಸುತ್ತಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮರಳುವುದಾಗಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ, ಶೀಘ್ರದಲ್ಲೇ ದೆಹಲಿಗೆ ಬರುತ್ತೇನೆ. ನಿಮ್ಮನ್ನ ಭೇಟಿ ಮಾಡಿ ಮಾತುಕತೆ ನಡೆಸ್ತೇನೆ. ರಾಜ್ಯ, ಕೇಂದ್ರ ಸರ್ಕಾರದ ಹೋರಾಟದ ಚರ್ಚೆ ಮಾಡಬೇಕಿದೆ.

ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ, ಶೀಘ್ರದಲ್ಲೇ ದೆಹಲಿಗೆ ಬರುತ್ತೇನೆ. ನಿಮ್ಮನ್ನ ಭೇಟಿ ಮಾಡಿ ಮಾತುಕತೆ ನಡೆಸ್ತೇನೆ. ರಾಜ್ಯ, ಕೇಂದ್ರ ಸರ್ಕಾರದ ಹೋರಾಟದ ಚರ್ಚೆ ಮಾಡಬೇಕಿದೆ.

ರಾಜಕಾರಣದ ಬಗ್ಗೆಯೂ ಚರ್ಚಿಸಬೇಕಿದೆ. ಮತ್ತಷ್ಟು ಹೋರಾಟ ತೀವ್ರಗೊಳಿಸಬೇಕಿದೆ. ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಿದ್ದೇವೆ ಎಂದಿದ್ದಾರೆ.

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಿಮ್ಮನ್ನ ಭೇಟಿ ಮಾಡಿ ಚರ್ಚಿಸುವುದಿದೆ. ಸಾಕಷ್ಟು ವಿಚಾರಗಳು ಕುರಿತು ಗಂಭೀರ ಚರ್ಚೆ ನಡೆಸಬೇಕೆಂದು ತಾವು ಕಾಲಾವಕಾಶ ನೀಡಿದ ತಕ್ಷಣ ದಿಲ್ಲಿಗೆ ಹೊರಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಆರೋಗ್ಯವನ್ನು ಸಹ ಸಿದ್ದರಾಮಯ್ಯ ವಿಚಾರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...