ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

Date:

ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

ಬೆಂಗಳೂರು:- ಸಿದ್ದರಾಮಯ್ಯ ಅರೆಸ್ಟ್ ಆಗಬಹುದು ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್​ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದು ಹೇಳಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್​ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.

ಹೈಕೋರ್ಟ್​ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ ಬಂದಲ್ಲಿ ಅವರ ಮೇಲೆ ಎಫ್​ಐಆರ್​ ಆದರೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಸಿಎಂ ರಾಜೀನಾಮೆ ಕೊಡಬೇಕಿದೆ. ತನಿಖಾಧಿಕಾರಿ ಯಾವ ರೀತಿ ಇರುತ್ತೆ ಅಂತ ನೋಡಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ !

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ ! ಒಂಬತ್ತನೇ ದಿನ...

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...