ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

Date:

ಸಿದ್ದರಾಮಯ್ಯ ಅರೆಸ್ಟ್ ಆಗಬಹುದು: ಸ್ನೇಹಮಯಿ ಕೃಷ್ಣ ಪರ ವಕೀಲರ ಸ್ಪೋಟಕ ಹೇಳಿಕೆ!

ಬೆಂಗಳೂರು:- ಸಿದ್ದರಾಮಯ್ಯ ಅರೆಸ್ಟ್ ಆಗಬಹುದು ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತ ಕುಮಾರ್​ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನದಲ್ಲಿ ಮುಂದುವರೆದರೆ ಪ್ರಾಮಾಣಿಕ ತನಿಖೆಯಾಗಲ್ಲ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗ ಎಫ್​ಐಆರ್​ ದಾಖಲಿಸಿ ತನಿಖೆ ಆಗಬೇಕು, ಅರೆಸ್ಟ್ ಕೂಡ ಮಾಡಬಹುದು ಎಂದು ಹೇಳಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ ಹೈಕೋರ್ಟ್​ ಕೊಟ್ಟ ತೀರ್ಪಿನ ಆದೇಶದ ಪ್ರತಿಯನ್ನು ನೀಡಿದ್ದೆವು. ಖಾಸಗಿ ದೂರಿಗೆ ನ್ಯಾಯ ಸಿಕ್ಕಿದೆ. 3 ತಿಂಗಳೊಳಗೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತಗೆ ಸೂಚನೆ ನೀಡಲಾಗಿದೆ. ಪ್ರಾಮಾಣಿಕವಾಗಿ ತನಿಖೆ ಆಗಬೇಕು ಅಂತಾ ಮನವಿ ಮಾಡುತ್ತೇವೆ ಎಂದಿದ್ದಾರೆ.

ಹೈಕೋರ್ಟ್​ನಲ್ಲಿ ದಾವೆ ಹೂಡುತ್ತೇವೆ. ಆಪಾದನೆ ಬಂದಲ್ಲಿ ಅವರ ಮೇಲೆ ಎಫ್​ಐಆರ್​ ಆದರೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮಾಡುತ್ತಾರೆ. ಸಿಎಂ ರಾಜೀನಾಮೆ ಕೊಡಬೇಕಿದೆ. ತನಿಖಾಧಿಕಾರಿ ಯಾವ ರೀತಿ ಇರುತ್ತೆ ಅಂತ ನೋಡಬೇಕು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...