No menu items!
12.1 C
Munich
Wednesday, May 20, 2026

“ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ”

Must read

” ಸಿದ್ದರಾಮಯ್ಯ ಜೆಡಿಎಸ್ ಮುಳುಗಿಸಲು ಯತ್ನಿಸಿದರು. ಈಗ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮ್ಮಿಶ್ರ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ಸಿದ್ಧಸೂತ್ರ ರೂಪಿಸಿದವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಬುಧವಾರ ಬಿಡದಿಯ ತೋಟದ ಮನೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕ ‌ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು, “ಸಿದ್ದರಾಮಯ್ಯನವರೇ ಇಷ್ಟು ದಿನ ನನ್ನ ಬಗ್ಗೆ ಮತ್ತು ನನ್ನ ಪಕ್ಷದ ಬಗ್ಗೆ ಮಾತನಾಡಿದ್ದು ಸಾಕು. ಎಲ್ಲವನ್ನೂ ಇಲ್ಲಿಗೆ ನಿಲ್ಲಿಸಿ. ನೀವು ನಿಲ್ಲಿಸದಿದ್ದರೆ ನಾನೂ ಮಾತನಾಡುವುದನ್ನು ಮುಂದುವರೆಸಬೇಕಾಗುತ್ತದೆ” ಎಂದರು.

ಸಿದ್ದರಾಮಯ್ಯ ಅವರು ಮೊದಲು ನಮ್ಮ ಬಗ್ಗೆ ಮಾತನಾಡುವುದನ್ನು ನಿಲ್ಲಿಸಲಿ. ಆಮೇಲೆ ನಾನು ಮಾತನಾಡುವುದನ್ನು ನಿಲ್ಲಿಸುತ್ತೇನೆ. ಸಿದ್ದರಾಮಯ್ಯ ವಿಶ್ವಾಸಕ್ಕೆ ಅರ್ಹವಲ್ಲದ ವ್ಯಕ್ತಿ. ಅವರು ನಮ್ಮ ಪಕ್ಷದ ವಿರುದ್ಧ ಸರಣಿ ಹೇಳಿಕೆಗಳನ್ನು ನೀಡುತ್ತಿರುವುದು ಒಂದೆಡೆ ಆಗುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷವನ್ನು ಕುತಂತ್ರದಿಂದ ಅವರೇ ಮತ್ತಷ್ಟು ಮುಳುಗಿಸುತ್ತಿದ್ದಾರೆ” ಎಂದು ಎಚ್. ಡಿ. ಕುಮಾರಸ್ವಾಮಿ ದೂರಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article