ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದ್ರು ಈಶ್ವರಪ್ಪ !

Date:

ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಪ್ಪಾ..? ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಕಾಲೆಳೆದಿದ್ದಾರೆ.

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಗೆ 25 ಲೋಕಸಭೆ ಕ್ಷೇತ್ರಗಳಲ್ಲಿ ಜನ ಆಶೀರ್ವಾದ ಮಾಡಿದ್ದಾರೆ. ಈಶ್ವರಪ್ಪನವರೇ ರಾಘವೇಂದ್ರರನ್ನು ಸೋಲಿಸುತ್ತಾರೆ ಎಂದು ನಿಂಬೆಹಣ್ಣು ರೇವಣ್ಣ ಹೇಳಿಕೆ ನೀಡಿದ್ದರು. ಬಿಜೆಪಿ ನನಗೆ ತಾಯಿ ಸಮಾನ. ಪಕ್ಷಕ್ಕೆ ದ್ರೋಹ ಮಾಡುವ ಅಭ್ಯಾಸ ನಮಗಿಲ್ಲ ಎಂದು ಈಶ್ವರಪ್ಪ ತಿಳಿಸಿದ್ದಾರೆ.

ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಕೇಳುತ್ತಿದ್ದರು. ಈಗ ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲಿದ್ದೀರಾ ಎಂದು ಕೇಳುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ.ಮುಖ್ಯಮಂತ್ರಿ ಹುದ್ದೆಗೆ ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಚುನಾವಣೆ ವೇಳೆ ನಾನು ಮಾತನಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾ ಮಗನೆ ಸೋಲಿಸುತ್ತೇವೆ ಎಂದು ಸಿದ್ದರಾಮಯ್ಯನವರಿಗೆ ಹೇಳಿದ್ದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...