ಸಿದ್ದರಾಮಯ್ಯ ತಲೆಗೆ ಏನಾಗಿದೆ : ಸಿ.ಟಿ.ರವಿ

Date:

ಭಾರತ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದ್ದರೆ ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಹೋರಾಟಕ್ಕೆ ನಿಂತಿವೆ. ರಾಜಕಾರಣ ಮಾಡುವ ಸಂದರ್ಭ ಇದಲ್ಲ. ಎಲ್ಲರೂ ಒಟ್ಟಾಗಿ ರೋಗವನ್ನು ಎದುರಿಸುವ ಸಂದರ್ಭ ಇದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‍್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರಕಾರ ಕೈಚೆಲ್ಲಿ ಕೂತಿದ್ದರೆ ಮೊದಲ ಅಲೆಯಲ್ಲಿ ಶೇ.99 ಸೋಂಕು ನಿವಾರಣೆ ಮಾಡಲು ಸಾಧ್ಯವಿತ್ತೇ ಎಂದು ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.

ಕೋವಿಡ್‌ ಆರಂಭವಾದಾಗ ದೇಶದಲ್ಲಿ ಒಂದೇ ಒಂದು ಕೋವಿಡ್‌ ಲ್ಯಾಬ್‌ ಇತ್ತು. ಈಗ 2,470ಕ್ಕೂ ಹೆಚ್ಚು ಲ್ಯಾಬ್‌ಗಳಿವೆ. ಜಿಲ್ಲಾಸ್ಪತ್ರೆಯಲ್ಲಿ ಶಾಶ್ವತ ಆಕ್ಸಿಜನ್‌ ಸೆಂಟರ್‌ ಮಾಡಲಾಗಿದೆ. ಮೊದಲ ಅಲೆಯನ್ನು ಒಂದೂ ಪಿಪಿಇ ಕಿಟ್‌, ಮಾಸ್ಕ್‌ ಇಲ್ಲದೆ ಎದುರಿಸಿದ್ದೇವೆ. ಭಾರತ ಕೋವಿಡ್‌ ವಿರುದ್ಧ ಹೋರಾಡುತ್ತಿದೆ. ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ ಮಾಡಬಾರದು. ಕೋವಿಡ್‌ ವಿರುದ್ಧ ಹೋರಾಟಕ್ಕೆ ಸಹಕರಿಸಬೇಕು ಎಂದರು.

ದೇಶದಲ್ಲಿ ಕೋವಿಡ್‌ ವ್ಯಾಕ್ಸಿನ್‌ ಕಂಡು ಹಿಡಿದರೆ ಪ್ರತಿಪಕ್ಷಗಳು ಇದು ಬಿಜೆಪಿ ವ್ಯಾಕ್ಸಿನ್‌ ಎಂದು ಪ್ರಚಾರ ಮಾಡಿದವು. ದೇಶದ ವಿಜ್ಞಾನಿಗಳ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸಿ ರಾಜಕಾರಣ ಮಾಡಿದ್ದು ಮರ್ಯಾದೆ ಇರುವವರು ಮಾಡುವ ಕೆಲಸವೇ ಎಂದು ಸಿ. ಟಿ. ರವಿ ಪ್ರಶ್ನಿಸಿದರು.

ರಾಜ್ಯಪಾಲರು ಸಭೆ ಕರೆದರೆ ಅವರಿಗೆ ಸಾಂವಿಧಾನಿಕ ಹಕ್ಕಿಲ್ಲ, ಹೇಗೆ ಸಭೆ ಕರೆದರು ಎಂದು ಪ್ರಶ್ನಿಸುತ್ತಾರೆ. ಪ್ರಧಾನಿ ಸಭೆ ಕರೆದರೆ ಅವರೇನು ಹೆಡ್‌ ಮಾಸ್ಟ್ರಾ ಎಂದು ಕೇಳುತ್ತಾರೆ. ಸಿದ್ದರಾಮಯ್ಯ ಅವರ ತಲೆಗೆ ಏನಾಗಿದೆ? ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರು ಸಭೆ ಕರೆದರೆ ಅವರಿಗೆ ಸಾಂವಿಧಾನಿಕ ಹಕ್ಕಿಲ್ಲ, ಹೇಗೆ ಸಭೆ ಕರೆದರು ಎಂದು ಪ್ರಶ್ನಿಸುತ್ತಾರೆ. ಪ್ರಧಾನಿ ಸಭೆ ಕರೆದರೆ ಅವರೇನು ಹೆಡ್‌ ಮಾಸ್ಟ್ರಾ ಎಂದು ಕೇಳುತ್ತಾರೆ. ಸಿದ್ದರಾಮಯ್ಯ ಅವರ ತಲೆಗೆ ಏನಾಗಿದೆ? ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದರು.

ಇದು ಕರ್ತವ್ಯ ನಿರ್ವಹಿಸುವ ಸಂದರ್ಭ. ಅಧಿಕಾರ ಚಲಾಯಿಸುವ ಸಂದರ್ಭ ಅಲ್ಲ. ಭಾರತ ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಬೇರೆ ದೇಶಗಳಿಂದ ಆಕ್ಸಿಜನ್‌ ತರಿಸಿಕೊಳ್ಳುತ್ತಿದೆ ಎಂದು ಸಿಟಿ ರವಿ ಹೇಳಿದರು.

ಏಪ್ರಿಲ್‌ ಮೊದಲ ವಾರದಲ್ಲೇ ಸೋಂಕಿನ ಪ್ರಮಾಣ 15 ಪಟ್ಟು ಹೆಚ್ಚಾಗಿದೆ. ರಾಜತಾಂತ್ರಿಕ ಅವಕಾಶ ಬಳಸಿಕೊಂಡು ಪ್ರಧಾನಿ ಬೇರೆ ಬೇರೆ ದೇಶಗಳ ಸಹಾಯ ಪಡೆದು ಎಲ್ಲ ವ್ಯವಸ್ಥೆ ಮಾಡುತ್ತಿದ್ದಾರೆ. ಇದು ಉತ್ತರ ಕೊಡುವ ಸಂದರ್ಭ ಅಲ್ಲ. ಕೊರೊನಾ ಬಳಿಕ ಇದೆಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಹೇಳಿದರು.

ಏಪ್ರಿಲ್‌ ಮೊದಲ ವಾರದಲ್ಲೇ ಸೋಂಕಿನ ಪ್ರಮಾಣ 15 ಪಟ್ಟು ಹೆಚ್ಚಾಗಿದೆ. ರಾಜತಾಂತ್ರಿಕ ಅವಕಾಶ ಬಳಸಿಕೊಂಡು ಪ್ರಧಾನಿ ಬೇರೆ ಬೇರೆ ದೇಶಗಳ ಸಹಾಯ ಪಡೆದು ಎಲ್ಲ ವ್ಯವಸ್ಥೆ ಮಾಡುತ್ತಿದ್ದಾರೆ. ಇದು ಉತ್ತರ ಕೊಡುವ ಸಂದರ್ಭ ಅಲ್ಲ. ಕೊರೊನಾ ಬಳಿಕ ಇದೆಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...