ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ: ಸಿ.ಟಿ.ರವಿ

Date:

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪರಿಷತ್‌ನ ಬಿಜೆಪಿ, ಜೆಡಿಎಸ್ ಸದಸ್ಯರು ಸರ್ಕಾರದ ರೇಟ್ ಕಾರ್ಡ್ ವಿರುದ್ಧ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದ ಎಲ್ಲೆ ಮೀರಿದೆ.
ಸಿದ್ದರಾಮಯ್ಯ ಅವರದ್ದು ಪಾರದರ್ಶಕ ಭ್ರಷ್ಟ ಸರ್ಕಾರ. ಇಲಾಖೆಗಳಲ್ಲಿ ವರ್ಗಾವಣೆಗೆ ರೇಟ್ ಕಾರ್ಡ್ ಫಿಕ್ಸ್ ಮಾಡಲಾಗಿದೆ. ಈ ರೇಟ್ ಕಾರ್ಡ್ ಫಿಕ್ಸ್ ಸತ್ಯ ಎಂದು ಆರೋಪಿಸಿದರು. ಇನ್ನೂ ರೇಟ್ ಕಾರ್ಡ್ ಸತ್ಯ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಇವರ ಭ್ರಷ್ಟಾಚಾರ ಬರಿಗಣ್ಣಿಗೆ ಕಾಣತ್ತೆ. ನಲವತ್ತು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅಂತಾರೆ ಸಿದ್ದರಾಮಯ್ಯ. ಇದನ್ನ ಯಾರೂ ಒಪ್ಪಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....