ಸಿದ್ದು ಸಿಎಂ ಆಗೋ ವಿಚಾರ : ಎಂ ಬಿ ಪಾಟೀಲರದ್ದು ‘ಚಮಚಗಿರಿ’ ಹೇಳಿಕೆ !?

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಕಾರ್ಯಕರ್ತರು ಹೇಳಿದರೆ ಅದು ಅಭಿಮಾನವಾಗುತ್ತದೆ. ಆದರೆ, ಒಬ್ಬ ಮಂತ್ರಿ ಹೇಳಿದರೆ ಅದು ಚಮಚಗಿರಿಯಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿರುವಂತಹವರು ಸಚಿವರಾದಂತಹ ಎಂ.ಬಿ.ಪಾಟೀಲ್ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೇಳುವುದು ಎಷ್ಟು ಸರಿ. ಸಂವಿಧಾನಾತ್ಮಕವಾಗಿ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಮುಖ್ಯಮಂತ್ರಿ ಇದ್ದರೂ ಕೂಡ ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ ಎಂದು ಹೇಳಿದರು.

ಎಂ.ಬಿ.ಪಾಟೀಲ್ ಅವರು ಯಾರನ್ನೋ ಮೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರ ವಿರುದ್ಧ ವಿಶ್ವನಾಥ್ ವಾಗ್ದಾಳಿ ನಡೆಸಿದರು. ಅವರ ಹೇಳಿಕೆ ಶಾಸನಬದ್ಧವಾಗಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.ಕಾರ್ಯಕರ್ತರು ಮುಖ್ಯಮಂತ್ರಿಗಳಾಗಬೇಕು ಎಂಬ ಒತ್ತಡ ಹೇರಿದರೆ ಅದನ್ನು ಅಭಿಮಾನ ಎಂದು ಪರಿಗಣಿಸಬಹುದು. ಆದರೆ, ಮಂತ್ರಿಗಳು ಹೇಳುವುದು ಬೇರೆಯೇ ಅರ್ಥ ಕಲ್ಪಿಸುತ್ತದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಕಾಗಿನೆಲೆಪೀಠದ ನಿರಂಜನಾನಂದಪುರಿ ಶ್ರೀಗಳ ಹೇಳಿಕೆ ತಪ್ಪಲ್ಲ. ಮಠಾಧೀಶರು ಕೂಡ ಮತದಾರರೇ ಆಗಿರುತ್ತಾರೆ. ಹಾಗಾಗಿ ಅವರ ಹೇಳಿಕೆ ಸರಿ ಇದೆ ಎಂದು ಹೇಳಿದರು.

ಸಿದ್ದು ಅವರೇ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಯಾರೋ ಒಬ್ಬರು ಸಿಎಂ ಆಗಲಿ ಎಂದು ಶ್ರೀಗಳು ಹೇಳಿದರೆ ತಪ್ಪಲ್ಲ. ಆದರೆ, ಇಂತಹ ಪಕ್ಷದವರೇ ಸಿಎಂ ಆಗಬೇಕೆಂದು ಹೇಳಿದರೆ ತಪ್ಪಾಗುತ್ತದೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...