ಸಿನಿಪ್ರೇಕ್ಷಕರಿಗೆ ಇದು ಗುಡ್ ನ್ಯೂಸ್!

Date:

ಕೊರೊನಾ ವೈರಸ್ ಹಾವಳಿಯಿಂದಾಗಿ ಚಿತ್ರಮಂದಿರಗಳು ಮತ್ತೆ ತೆರೆದರು ಸಹ ಸಂಪೂರ್ಣ ಭರ್ತಿ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿರಲಿಲ್ಲ. ಇತ್ತೀಚಿಗೆ ಮಾಸ್ಟರ್, ಕ್ರ್ಯಾಕ್ ನಂತಹ ದೊಡ್ಡ ಪರಭಾಷಾ ಸಿನಿಮಾಗಳು ಬಿಡುಗಡೆಯಾದವು. ಚಿತ್ರಮಂದಿರದಲ್ಲಿ ಅರ್ಧದಷ್ಟು ಜನರಿಗೆ ಮಾತ್ರ ಅವಕಾಶ ಇತ್ತು. ತಮಿಳು ನಟ ವಿಜಯ್ ಸಂಪೂರ್ಣ ಚಿತ್ರಮಂದಿರ ತೆರೆಯಲು ಅವಕಾಶ ಕೊಡಿ ಅರ್ಜಿಯನ್ನು ಹಾಕಿದರು ಸಹ ಕೇಂದ್ರ ಸರ್ಕಾರ ಅನುಮತಿ ನೀಡಲಿಲ್ಲ..

 

 

ಇನ್ನು ಇದೀಗ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ಬದಲಾಯಿಸಿಕೊಂಡಿದ್ದು ಹೊಸದೊಂದು ನಿರ್ಧಾರವನ್ನ ಹೊರಡಿಸಿದೆ. ಹೌದು ಫೆಬ್ರವರಿ ತಿಂಗಳಿನಿಂದ ಭಾರತದಲ್ಲಿರುವ ಎಲ್ಲಾ ಚಿತ್ರಮಂದಿರಗಳಲ್ಲೂ ಸಹ ಸಂಪೂರ್ಣ ಭರ್ತಿಗೆ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ. ಕನ್ನಡದ ನಟ ಅನಿಶ್ ಅಭಿನಯದ ರಾಮಾರ್ಜುನ ಚಿತ್ರ ಈ ಅವಕಾಶವನ್ನು ಬಳಸಿಕೊಳ್ಳಲಿರುವ ಮೊದಲ ಸಿನಿಮಾವಾಗಲಿದೆ.

 

 

ಇನ್ನು ಮುಂದೆ ಬಿಡುಗಡೆಯಾಗಲಿರುವ ಎಲ್ಲಾ ಚಿತ್ರಗಳಿಗೂ ಸಹ ತುಂಬಿದ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶಿಸುವ ಅವಕಾಶ ಲಭಿಸಿದೆ. ಇನ್ನು ಕನ್ನಡದಲ್ಲಿ ಸಾಲುಸಾಲು ಕನ್ನಡ ಸಿನಿಮಾಗಳು ಬಿಡುಗಡೆಗೆ ಕಾಯುತ್ತಿದ್ದವು. ಇದೀಗ ಆ ಚಿತ್ರಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಈಗಾಗಲೇ ಬಿಡುಗಡೆಯ ದಿನಾಂಕಗಳನ್ನು ಘೋಷಣೆ ಮಾಡಿರುವ ಕನ್ನಡ ಸಿನಿಮಾಗಳೆಲ್ಲ ತುಂಬಿದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿವೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...