ಬೆಂಗಳೂರು: ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲ ವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಅವರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.
ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ರೆ ಇಲ್ಲೇನೂ ಮಾಡೋ ಆಗಿಲ್ವಾ..?. ಅಸೆಂಬ್ಲಿಯಲ್ಲಿ ಅವರು ಯಾವ ವಿಷಯ ಚರ್ಚೆಗೆ ತಗೋತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಲೆಟರ್ ಕೊಡ್ತಾರೋ ನೋಡಬೇಕು. ಬಿಜೆಪಿಯವರಿಗೆ ನಾವು ಉತ್ತರ ಕೊಡ್ತೀವಿ, ಹಿಂಜರಿವುದಿಲ್ಲ ಎಂದು ತಿಳಿಸಿದರು.