ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

Date:

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿಯಾಗಿರುವ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಪ್ರಣವ್ (1 ವರ್ಷ 8 ತಿಂಗಳು) ಮೃತಪಟ್ಟ ಬಾಲಕನಾಗಿದ್ದು, ನವಂಬರ್ 7 ರಂದು ಸಂಜೆ 3.11 ಸುಮಾರಿಗೆ ನಡೆದ ದುರ್ಘಟನೆಯಾಗಿದೆ.

ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ ಎಂದು ಗುರುತಿಸಲಾಗಿದೆ. ಮಗುವಿಗೆ ಒಂದು ವರ್ಷ 8 ತಿಂಗಳು. ನ.7ರ ಸಂಜೆ ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ ವೈರಿಂಗ್ ವಿದ್ಯುತ್ ತಂತಿ ಲಾರಿಗೆ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಕೂಗಿಕೊಂಡಿದ್ದಾರೆ. ಆದರೆ ಚಾಲಕ ಗಮನಿಸದೇ ಲಾರಿ ಚಲಾಯಿಸಿದ್ದರಿಂದ ವೈರಿಂಗ್ ಕಂಬ ಕಿತ್ತು ಬಂದಿದೆ.

ಅಲ್ಲದೇ ಮನೆಯ ಗೋಡೆ ಕುಸಿದು ಆಟ ಆಡ್ತಿದ್ದ ಮಗುವಿನ ಮೇಲೆ ಬಿದ್ದಿದೆ ಗಂಭೀರವಾಗಿ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಉಸಿರುಚೆಲ್ಲಿದೆ. ಈ ಘಟನೆ ನಡೆದ ಕೂಡಲೇ ಲಾರಿ ಚಾಲಕ ವಾಹನವನ್ನು ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...