No menu items!
13.9 C
Munich
Wednesday, April 29, 2026

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ ಕಾರು ಜಖಂ – ವ್ಯಕ್ತಿ ಮೇಲೆ ಹಲ್ಲೆ

Must read

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ ಕಾರು ಜಖಂ – ವ್ಯಕ್ತಿ ಮೇಲೆ ಹಲ್ಲೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಮನೆ ಮುಂದೆ ನಿಲ್ಲಿಸಿದ ಕಾರು ಜಖಂಗೊಳಿಸಿ, ವ್ಯಕ್ತಿ ಮೇಲೆ ಹಲ್ಲೆ‌ ಮಾಡಿರುವ ಘಟನೆ ನಗರದ ಬ್ಯಾಡರಹಳ್ಳಿಯ ತುಂಗಾನಗರದಲ್ಲಿ ಭಾನುವಾರ ರಾತ್ರಿ ಘಟನೆ ಜರುಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಗಂಗೇಗೌಡ ಎಂಬುವರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಅಟ್ಟಹಾಸದ ದೃಶ್ಯಾವಳಿ ಸೆರೆಯಾಗಿದೆ.
ಈ ಗ್ಯಾಂಗ್, ನಿನ್ನೆ ರಾತ್ರಿ ಶಿವಗಂಗೆಗೌಡರ ಮನೆ ಸಮೀಪ ಎಣ್ಣೆ ಹಾಕುತ್ತಾ ಕುಳಿತಿತ್ತು. ಇದನ್ನ ಪ್ರಶ್ನೆ ಮಾಡಿ ಎದ್ದು ಹೋಗುವಂತೆ ಶಿವಗಂಗೆಗೌಡ ಗದರಿದ್ದರು. ನಂತರ ಶಿವಗಂಗೆಗೌಡ ಅವರಿಗೆ ಸೇರಿದ ಇನ್ನೋವಾ ಕಾರು ಜಖಂ ಮಾಡಿದ್ದಾರೆ. ಸಿಮೆಂಟ್ ಇಟ್ಟಿಗೆಯಿಂದ ಕಾರಿನ ಗಾಜು ಒಡೆದ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ.
ಈ ವೇಳೆ ಕಿಡಿಗೇಡಿಗಳನ್ನ ಓಡಿಸಲು ಶಿವಗಂಗೆಗೌಡರು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಶಿವಗಂಗೆಗೌಡ ಮೇಲೆ ಗ್ಯಾಂಗ್ ಅಟ್ಯಾಕ್ ಮಾಡಿದೆ. ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದ್ದು, ಗಾಯಾಳು ಶಿವಗಂಗೆಗೌಡ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article