ಸಿಹಿಸುದ್ದಿ: ಮೈಸೂರು-ಬೆಂಗಳೂರು ರೈಲು ಪುನಾರಂಭ

Date:

ಬೆಂಗಳೂರು, ಜೂನ್ 18; ಬೆಂಗಳೂರು-ಮೈಸೂರು ನಡುವಿನ ಮೆಮು ಎಕ್ಸ್‌ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಮೈಸೂರು ವಿಭಾಗ ಪುನರಾರಂಭಿಸಿದೆ. ತುಮಕೂರು-ಯಶವಂತಪುರ ನಡುವೆ ಮತ್ತೊಂದು ಡೆಮು ರೈಲು ಸಂಚಾರ ಆರಂಭವಾಗಿದೆ.

ಬೆಂಗಳೂರು-ಮೈಸೂರು ನಡುವೆ ರಾಜ್ಯರಾಣಿ ಎಕ್ಸ್‌ಪ್ರೆಸ್ (06567/ 06568), ಚಾಮುಂಡಿ ಎಕ್ಸ್‌ಪ್ರೆಸ್ (06569/ 06570) ಮತ್ತು ಟಿಪ್ಪು ಎಕ್ಸ್‌ಪ್ರೆಸ್ (06201/ 06202) ರೈಲುಗಳು ಪ್ರತಿದಿನ ಸಂಚಾರ ಆರಂಭಿಸಿವೆ.

 

ಜೂನ್ 20ರಿಂದ ಮೈಸೂರು-ಬಾಗಲಕೋಟೆ ನಡುವಿನ ಬಸವ ಎಕ್ಸ್‌ಪ್ರೆಸ್ (07307/ 07308) ಸಂಚಾರ ನಡೆಸಲಿದೆ. ಜೂನ್ 16ರಿಂದ ಮೈಸೂರು-ಕೊಚ್ಚುವೇಳಿ (06316/ 06315) ಸಂಚಾರ ಪ್ರಾರಂಭವಾಗಿದೆ.

ಮತ್ತೊಂದು ಡೆಮು ರೈಲು; ಬೆಂಗಳೂರಿನ ಯಶವಂತಪುರ ಮತ್ತು ತುಮಕೂರು ನಡುವೆ ಮತ್ತೊಂದುದ ಡೆಮು ರೈಲು ಸೇವೆ ಆರಂಭವಾಗಿದೆ. ಯಶವಂತಪುರದಿಂದ ಬೆಳಗ್ಗೆ 5.30ಕ್ಕೆ ತುಮಕೂರಿನಿಂದ 8ಕ್ಕೆ ಹೊರಡಲಿದೆ. ಯಶವಂತಪುರದಿಂದ ಬೆಳಗ್ಗೆ 9.30ಕ್ಕೆ. ತುಮಕೂರಿನಿಂದ ಸಂಜೆ 4.20ಕ್ಕೆ ಹೊರಡಲಿದೆ. ಯಶವಂತಪುರದಿಂದ ಸಂಜೆ 6ಕ್ಕೆ ಮತ್ತು ತುಮಕೂರಿನಿಂದ ರಾತ್ರಿ 7.40ಕ್ಕೆ ಹೊರಡಲಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...